2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28 ಶನಿವಾರದಿಂದ ಮಾರ್ಚ್ 17 ಮಂಗಳವಾರದವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯ ವರೆಗೆ ಜರುಗಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 04, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 03, ಹೊಸಕೋಟೆ ತಾಲ್ಲೂಕಿನಲ್ಲಿ 07, ನೆಲಮಂಗಲ ತಾಲ್ಲೂಕಿನಲ್ಲಿ 06 ಒಟ್ಟು 20 ಪರೀಕ್ಷಾ ಕೇಂದ್ರಗಳು ಇವೆ.
ಪರೀಕ್ಷೆಗೆ ನೋಂದಾಯಿಸಿಕೊಂಡ ಹೊಸ ವಿದ್ಯಾರ್ಥಿಗಳು 10,821, ಖಾಸಗಿ ವಿದ್ಯಾರ್ಥಿಗಳು 166, ಪುನರಾವರ್ತಿತ ವಿದ್ಯಾರ್ಥಿಗಳು 578 ಸೇರಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಸಂಖ್ಯೆ 11,565 ಇದ್ದು, ಕಲಾ ವಿಭಾಗದಲ್ಲಿ 833 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5405, ವಿಜ್ಞಾನ ವಿಭಾಗದಲ್ಲಿ 4583, ಸರ್ಕಾರಿ ಕಾಲೇಜುಗಳಲ್ಲಿ 1,724 ವಿದ್ಯಾರ್ಥಿಗಳು, ಅನುದಾನಿತ ಕಾಲೇಜಿನಲ್ಲಿ 1,074, ಅನುದಾನರಹಿತ ಕಾಲೇಜಿನಲ್ಲಿ 8,023 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಗಂಡು ಮಕ್ಕಳ ಸಂಖ್ಯೆ 4695, ಹೆಣ್ಣುಮಕ್ಕಳ ಸಂಖ್ಯೆ 6126 ಸೇರಿ ಒಟ್ಟು 10,821 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲ್ಲಿದ್ದಾರೆ. ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…