2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418. ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
“ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದರುರಿಸಬೇಕು. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ, ಒತ್ತಡ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕವಾದ ವಾತಾವರಣವನ್ನು ಪೋಷಕರು ನೀಡಬೇಕು” ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…