ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ (law) ತರಗತಿಗಳು ಪ್ರಾರಂಭ

ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲರಾದ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.

ಸೆ.24ರ ಬುಧವಾರ ಬೆಳಗ್ಗೆ 9:30ರಿಂದ ತರಗತಿಗಳು ಪ್ರಾರಂಭವಾಗಿ ಮಧ್ಯಾಹ್ನ 3ಕ್ಕೆ ಮುಕ್ತಾಯವಾಗಲಿವೆ. ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಈಗಾಗಲೇ ಮೂರು ವರ್ಷದ ಎಲ್ ಎಲ್ ಬಿ ಪದವಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ‌ ನಾಳೆಯಿಂದ ಪ್ರಾರಂಭವಾಗುವ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.

ಮೂರು ವರ್ಷದ ಎಲ್ ಎಲ್ ಬಿ ಪದವಿಯ ಮೊದಲ ಬ್ಯಾಚ್ ನಲ್ಲಿ ಒಟ್ಟು 9 ಮಂದಿ ವಿದ್ಯಾರ್ಥಿನಿಯರು, 51 ಮಂದಿ ವಿದ್ಯಾರ್ಥಿಗಳು ಸೇರಿ 60 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

ಕಾನೂನು ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಇದೇ ಮೊದಲ ಬಾರಿಗೆ ಶ್ರೀ ಕೊಂಗಾಡಿಯಪ್ಪ ಕಾಲೇಜ್ ಕ್ಯಾಂಪಸ್ ನಲ್ಲಿ ಲಾ ಕೋರ್ಸ್ ಪ್ರಾರಂಭ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು  ಕಾನೂನು ಪದವಿ ಪಡೆಯಲು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ದೂರದ ಜಿಲ್ಲೆಗಳಿಗೆ ಹೋಗಿ ಪದವಿ ಪಡೆಯಲಾಗುತ್ತಿತ್ತು. ಇದೀಗ ಜಿಲ್ಲೆಯ ಅದರಲ್ಲೂ ದೊಡ್ಡಬಳ್ಳಾಪುರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಲಾ ಕೋರ್ಸ್ ನ್ನು  ಈ ವರ್ಷದಿಂದ ಆರಂಭಿಸಲಾಗಿದೆ ಎಂದು ಹೇಳಿದರು.

ತರಗತಿಗಳನ್ನು ಪ್ರಾರಂಭ ಮಾಡಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ನುರಿತ ಉಪನ್ಯಾಸಕರು, ಮೂಟ್ ಕೋರ್ಟ್ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಪಾಠ ಪ್ರವಚನಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ತರಗತಿಗಳಿಗೆ ನ್ಯಾಯಾಧೀಶರು, ಪ್ರಖ್ಯಾತ ವಕೀಲರು, ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾನೂನು ತರಬೇತಿ ನೀಡಲಾಗುವುದು ಎಂದರು…

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

7 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

10 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

12 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

14 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

14 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

21 hours ago