ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ (law) ತರಗತಿಗಳು ಪ್ರಾರಂಭ

ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲರಾದ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.

ಸೆ.24ರ ಬುಧವಾರ ಬೆಳಗ್ಗೆ 9:30ರಿಂದ ತರಗತಿಗಳು ಪ್ರಾರಂಭವಾಗಿ ಮಧ್ಯಾಹ್ನ 3ಕ್ಕೆ ಮುಕ್ತಾಯವಾಗಲಿವೆ. ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಈಗಾಗಲೇ ಮೂರು ವರ್ಷದ ಎಲ್ ಎಲ್ ಬಿ ಪದವಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ‌ ನಾಳೆಯಿಂದ ಪ್ರಾರಂಭವಾಗುವ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.

ಮೂರು ವರ್ಷದ ಎಲ್ ಎಲ್ ಬಿ ಪದವಿಯ ಮೊದಲ ಬ್ಯಾಚ್ ನಲ್ಲಿ ಒಟ್ಟು 9 ಮಂದಿ ವಿದ್ಯಾರ್ಥಿನಿಯರು, 51 ಮಂದಿ ವಿದ್ಯಾರ್ಥಿಗಳು ಸೇರಿ 60 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

ಕಾನೂನು ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಇದೇ ಮೊದಲ ಬಾರಿಗೆ ಶ್ರೀ ಕೊಂಗಾಡಿಯಪ್ಪ ಕಾಲೇಜ್ ಕ್ಯಾಂಪಸ್ ನಲ್ಲಿ ಲಾ ಕೋರ್ಸ್ ಪ್ರಾರಂಭ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು  ಕಾನೂನು ಪದವಿ ಪಡೆಯಲು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ದೂರದ ಜಿಲ್ಲೆಗಳಿಗೆ ಹೋಗಿ ಪದವಿ ಪಡೆಯಲಾಗುತ್ತಿತ್ತು. ಇದೀಗ ಜಿಲ್ಲೆಯ ಅದರಲ್ಲೂ ದೊಡ್ಡಬಳ್ಳಾಪುರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಲಾ ಕೋರ್ಸ್ ನ್ನು  ಈ ವರ್ಷದಿಂದ ಆರಂಭಿಸಲಾಗಿದೆ ಎಂದು ಹೇಳಿದರು.

ತರಗತಿಗಳನ್ನು ಪ್ರಾರಂಭ ಮಾಡಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ನುರಿತ ಉಪನ್ಯಾಸಕರು, ಮೂಟ್ ಕೋರ್ಟ್ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಪಾಠ ಪ್ರವಚನಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ತರಗತಿಗಳಿಗೆ ನ್ಯಾಯಾಧೀಶರು, ಪ್ರಖ್ಯಾತ ವಕೀಲರು, ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾನೂನು ತರಬೇತಿ ನೀಡಲಾಗುವುದು ಎಂದರು…

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

2 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

1 day ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 day ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago