ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲರಾದ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.
ಸೆ.24ರ ಬುಧವಾರ ಬೆಳಗ್ಗೆ 9:30ರಿಂದ ತರಗತಿಗಳು ಪ್ರಾರಂಭವಾಗಿ ಮಧ್ಯಾಹ್ನ 3ಕ್ಕೆ ಮುಕ್ತಾಯವಾಗಲಿವೆ. ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಈಗಾಗಲೇ ಮೂರು ವರ್ಷದ ಎಲ್ ಎಲ್ ಬಿ ಪದವಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಾಳೆಯಿಂದ ಪ್ರಾರಂಭವಾಗುವ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.
ಮೂರು ವರ್ಷದ ಎಲ್ ಎಲ್ ಬಿ ಪದವಿಯ ಮೊದಲ ಬ್ಯಾಚ್ ನಲ್ಲಿ ಒಟ್ಟು 9 ಮಂದಿ ವಿದ್ಯಾರ್ಥಿನಿಯರು, 51 ಮಂದಿ ವಿದ್ಯಾರ್ಥಿಗಳು ಸೇರಿ 60 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.
ಕಾನೂನು ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಇದೇ ಮೊದಲ ಬಾರಿಗೆ ಶ್ರೀ ಕೊಂಗಾಡಿಯಪ್ಪ ಕಾಲೇಜ್ ಕ್ಯಾಂಪಸ್ ನಲ್ಲಿ ಲಾ ಕೋರ್ಸ್ ಪ್ರಾರಂಭ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ಕಾನೂನು ಪದವಿ ಪಡೆಯಲು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ದೂರದ ಜಿಲ್ಲೆಗಳಿಗೆ ಹೋಗಿ ಪದವಿ ಪಡೆಯಲಾಗುತ್ತಿತ್ತು. ಇದೀಗ ಜಿಲ್ಲೆಯ ಅದರಲ್ಲೂ ದೊಡ್ಡಬಳ್ಳಾಪುರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಲಾ ಕೋರ್ಸ್ ನ್ನು ಈ ವರ್ಷದಿಂದ ಆರಂಭಿಸಲಾಗಿದೆ ಎಂದು ಹೇಳಿದರು.
ತರಗತಿಗಳನ್ನು ಪ್ರಾರಂಭ ಮಾಡಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ನುರಿತ ಉಪನ್ಯಾಸಕರು, ಮೂಟ್ ಕೋರ್ಟ್ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಪಾಠ ಪ್ರವಚನಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ತರಗತಿಗಳಿಗೆ ನ್ಯಾಯಾಧೀಶರು, ಪ್ರಖ್ಯಾತ ವಕೀಲರು, ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾನೂನು ತರಬೇತಿ ನೀಡಲಾಗುವುದು ಎಂದರು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…