ನಾಳೆ ಹಾಲು ಉತ್ಪಾದಕರ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳ ಪ್ರಾದೇಶಿಕ ಸಭೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ 2022-23ನೇ ಸಾಲಿನ ಪ್ರಾದೇಶಿಕ ಸಭೆಯನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ಆಗಸ್ಟ್ 8ರ ಬೆಳಗ್ಗೆ 10:30ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮವನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಹೆಚ್.ಪಿ ರಾಜ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಜ್ಯೋತಿ ಪ್ರಜ್ವಲನೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಂ.ಮಂಜುನಾಥ್ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಮನಗರ ನಿರ್ದೇಶಕ ಪಿ.ನಾಗರಾಜ್, ಹೊಸಕೋಟೆ ನಿರ್ದೇಶಕ ಸಿ.ಮಂಜುನಾಥ್, ಆನೇಕಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ, ಮಾಗಡಿ ನಿರ್ದೇಶಕ ನರಸಿಂಹಮೂರ್ತಿ, ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ನಿರ್ದೇಶಕರು ಭಾಗವಹಿಸಲಿದ್ದಾರೆ.

ಪ್ರಾದೇಶಿಕ ಸಭೆಯಲ್ಲಿ ಹಾಲು ಶೇಖರಣೆ, ಹಾಲಿನ ಗುಣಮಟ್ಟ, ಹಾಲು ಸಾಗಾಣಿಕೆ ಮಾರ್ಗ, ತಾಂತ್ರಿಕ ಸೌಲಭ್ಯ, ಒಕ್ಕೂಟ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ಇತರೆ ವಿಷಯಗಳ ಚರ್ಚೆ ಮಾಡಲಾಗುತ್ತದೆ. ಜೊತೆಗೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರು, ಅತ್ಯುತ್ತಮ ಹಾಲು ಉತ್ಪಾದಕರ ಸಂಘಗಳು ಹಾಗೂ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗುತ್ತದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

7 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

8 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

8 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

12 hours ago