ನಾಳೆ ಹಾಲು ಉತ್ಪಾದಕರ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳ ಪ್ರಾದೇಶಿಕ ಸಭೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ 2022-23ನೇ ಸಾಲಿನ ಪ್ರಾದೇಶಿಕ ಸಭೆಯನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ಆಗಸ್ಟ್ 8ರ ಬೆಳಗ್ಗೆ 10:30ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮವನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಹೆಚ್.ಪಿ ರಾಜ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಜ್ಯೋತಿ ಪ್ರಜ್ವಲನೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಂ.ಮಂಜುನಾಥ್ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಮನಗರ ನಿರ್ದೇಶಕ ಪಿ.ನಾಗರಾಜ್, ಹೊಸಕೋಟೆ ನಿರ್ದೇಶಕ ಸಿ.ಮಂಜುನಾಥ್, ಆನೇಕಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ, ಮಾಗಡಿ ನಿರ್ದೇಶಕ ನರಸಿಂಹಮೂರ್ತಿ, ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ನಿರ್ದೇಶಕರು ಭಾಗವಹಿಸಲಿದ್ದಾರೆ.

ಪ್ರಾದೇಶಿಕ ಸಭೆಯಲ್ಲಿ ಹಾಲು ಶೇಖರಣೆ, ಹಾಲಿನ ಗುಣಮಟ್ಟ, ಹಾಲು ಸಾಗಾಣಿಕೆ ಮಾರ್ಗ, ತಾಂತ್ರಿಕ ಸೌಲಭ್ಯ, ಒಕ್ಕೂಟ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ಇತರೆ ವಿಷಯಗಳ ಚರ್ಚೆ ಮಾಡಲಾಗುತ್ತದೆ. ಜೊತೆಗೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರು, ಅತ್ಯುತ್ತಮ ಹಾಲು ಉತ್ಪಾದಕರ ಸಂಘಗಳು ಹಾಗೂ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗುತ್ತದೆ.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

33 minutes ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

10 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

16 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

17 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago