ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದರು.
ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…