ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದರು.
ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…