ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ- ಸಿಎಂ ಸಿದ್ದರಾಮಯ್ಯ

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದರು.

ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago