ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ- ಸಿಎಂ ಸಿದ್ದರಾಮಯ್ಯ

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದರು.

ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಹೇಳಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago