Categories: ಲೇಖನ

ನಾವುಗಳು ಸುಭಾಷ್ ಚಂದ್ರ ಬೋಸ್ ಅವರನ್ನು ಮರೆಯುವುದು ಬೇಡ……

ಸುಭಾಷ್ ಚಂದ್ರ ಬೋಸ್……….

ಜನವರಿ 23 — 1897……

ಬೇಕಾದರೆ ಗಮನಿಸಿ…..

ಯಾವ ಮಾಧ್ಯಮಗಳು ಬಹುಶಃ ಇಂದು ಸುಭಾಷ್ ಚಂದ್ರ ಬೋಸ್ ಅವರನ್ನು ನೆನಪಿಸಿಕೊಂಡು ಒಂದೆರಡು ಗಂಟೆಗಳ ಅವರ ವ್ಯಕ್ತಿತ್ವ ಬಿಂಬಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಿಲ್ಲ. ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದ ತ್ಯಾಗ – ಮಹತ್ವ ತಿಳಿಸುವ ಪ್ರಯತ್ನ ಮಾಡುವುದಿಲ್ಲ. ಅವರಲ್ಲಿ ಕೆಲವರು ಯಾವ ಸಿನಿಮಾ ನಟಿ ಗರ್ಭಿಣಿಯಾಗಿದ್ದಾರೆ ಎಂಬ ಹುಡುಕಾಟದಲ್ಲಿ ಇರುತ್ತಾರೆ. ಆದರೆ ನಾವುಗಳು ಸುಭಾಷ್ ಅವರನ್ನು ಮರೆಯುವುದು ಬೇಡ……

ಈ. ವಿಷಯದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ನಮ್ಮ ತಂದೆಯವರ ಬಗ್ಗೆ ನನಗೊಂದು ಹೆಮ್ಮೆ. ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮದಿನ – ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ನನ್ನ ಹೆಸರು ವಿವೇಕಾನಂದ ನನ್ನ ಒಡಹುಟ್ಟಿದ ಅಣ್ಣನ ಹೆಸರು ‌ಸುಭಾಷ್……
ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯ ನೆನಪಿನಲ್ಲಿ ಬಹುಶಃ ಅವರು ಈ ಹೆಸರುಗಳನ್ನು ತಮ್ಮ ಇಬ್ಬರೂ ಮಕ್ಕಳಿಗೆ ಇಟ್ಟಿರಬಹುದು ಎಂಬ ಊಹೆ ನನ್ನದು……

ಮತ್ತೆ ಮತ್ತೆ ನೆನಪಾಗುವ ಕ್ರಾಂತಿಕಾರಿ ನಾಯಕ ಸುಭಾಷ್ ಚಂದ್ರ ಬೋಸ್……

ಭಾರತ ಸ್ವಾತಂತ್ರ್ಯ ಹೋರಾಟದ ಕೆಲವೇ ಪ್ರಮುಖ ನಾಯಕತ್ವಗಳಲ್ಲಿ ಬೋಸ್ ಸಹ ಒಬ್ಬರು……

ಆಗಿನ ಅತ್ಯುನ್ನತ ಓದಿನ ಐಸಿಎಸ್ ಪರೀಕ್ಷೆ ದಿಕ್ಕರಿಸಿದ ಸ್ವಾತಂತ್ರ್ಯ ಪ್ರೇಮಿ…..

ಮಹಾತ್ಮ ಗಾಂಧಿಯವರ ಅಹಿಂಸೆಯ ಪ್ರತಿಪಾದನೆಯ ವಿರುದ್ಧ ಸೈನಿಕ ಶಕ್ತಿ ಪ್ರತಿಪಾದಿಸಿ ಒಂದಷ್ಟು ಜನಪ್ರಿಯತೆ ಗಳಿಸಿದ ವೀರ ಯೋಧ……

ಜಗತ್ತು ಕಂಡ ನರಹಂತಕ ಹಿಟ್ಲರ್ ಸಹಕಾರ ಪಡೆಯಲು ಪ್ರಯತ್ನಿಸಿ ತಪ್ಪು ದಾರಿ ಹಿಡಿದ ಆತುರಗಾರ….

ಭಾರತದ ಸ್ವಾತಂತ್ರ್ಯದ ಮೊದಲ ರಾಷ್ಟ್ರ ಧ್ವಜವನ್ನು ತನ್ನ ಆಜಾದ್ ಹಿಂದ್ ಫೌಜ್ ( I N A ) ಎಂಬ ಸೈನ್ಯದ ಮೂಲಕ ರಂಗೂನ್ ನಲ್ಲಿ ಹಾರಿಸಿ ಸಂಭ್ರಮ ಪಟ್ಟ ಧೀರೋದಾತ್ತ………

ಸ್ವಾಮಿ ವಿವೇಕಾನಂದರ ಭಾಷಣಗಳಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಅಮರ ಜೀವಿ………

ನತದೃಷ್ಟ ನೇತಾಜಿ…….

ನಮ್ಮ ಸ್ವಾತಂತ್ರ್ಯ ಹೋರಾಟದ ಅತ್ಯಂತ ನತದೃಷ್ಟ ವ್ಯಕ್ತಿ ಸುಭಾಷ್ ಚಂದ್ರ ಬೋಸ್. ಗಾಂಧಿ ನಂತರದ ಮಹತ್ವದ ವ್ಯಕ್ತಿಯೂ ಸಹ……

ನೆಹರು ಮತ್ತು ಬೋಸರ ಆಯ್ಕೆಯಲ್ಲಿ ಗಾಂಧಿ ತಮ್ಮ ಅಜ್ಞಾಪಾಲಕರು – ಸೌಮ್ಯ ಸ್ವಭಾವದವರು – ಸೂಕ್ಷ್ಮ ಮತಿಗಳು ಆದ ನೆಹರು ಅವರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ……

ಒಂದಷ್ಟು ಆಕ್ರಮಣಕಾರಿಯೂ ದುಡುಕು ಸ್ವಭಾವದವರೂ ಆದ ಸುಭಾಷರು ಸಹಜವಾಗಿ ಗಾಂಧಿಯವರ ಅಸಹನೆ, ಅಸಮಾಧಾನ ಮತ್ತು ನಿರ್ಲಕ್ಷ್ಯಕ್ಕೆ ಒಳಗಾಗುತ್ತಾರೆ. ಅದು ಆ ಕ್ಷಣದ ಸರಿಯಾದ ಆಯ್ಕೆ ಇರಬಹುದು……..

ಗಾಂಧಿಯವರ ಅಹಿಂಸೆಗೆ ವಿರುದ್ದವಾಗಿ
” ಸ್ವಾಭಿಮಾನದ ರಕ್ಷಣೆಗಾಗಿ, ಈ ನೆಲದ ಉಳಿವಿಗಾಗಿ ” ಆಕ್ರಮಣದ – ಕೆಚ್ಚೆದೆಯ ಸೈನಿಕ ಹೋರಾಟ ಮಾಡಿದವರು ನೇತಾಜಿ…….

ಗಾಂಧಿಯಂತ ಅತ್ಯಂತ ಪ್ರಬಲ ಮತ್ತು ಆಗಿನ ಬಹುತೇಕ ಜನರ ಆರಾಧ್ಯದೈವವಾಗಿದ್ದ, ತಮ್ಮ ಚಿಂತನೆಗಳಿಂದ ಇಡೀ ದೇಶವನ್ನೇ ಆಕ್ರಮಿಸಿದ್ದ ವ್ಯಕ್ತಿಯ ಇಷ್ಟಕ್ಕೆ ವಿರುಧ್ಧವಾಗಿ ಎರಡು ಬಾರಿ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದುದು ಬೋಸರ ಅಪಾರ ಸಂಘಟನಾ ಸಾಮರ್ಥ್ಯಕ್ಕೆ ಸಾಕ್ಷಿ…….

ಗಾಂಧಿಯ ಅಹಿಂಸಾ ಹೋರಾಟವನ್ನು ಜನರೆಲ್ಲಾ ಒಪ್ಪಿದ್ದ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಸೈನ್ಯವನ್ನು ( INA) ಕಟ್ಟಿ ಬ್ರಿಟೀಷರ ವಿರುದ್ಧ ಹೋರಾಡಿ ಆರಂಭದಲ್ಲಿ ಒಂದಷ್ಟು ಯಶಸ್ಸು ಗಳಿಸಿದ್ದು ಅಮೋಘ ಸಾಧನೆ…….

ಇಲ್ಲಿ ಒಂದು ವಿಪರ್ಯಾಸವೆಂದರೆ, ಗಾಂಧಿ ತನ್ನ ನಂಬಿಕೆಗೆ ವಿರುದ್ಧವಾಗಿ ಎರಡನೇ ಮಹಾಯುದ್ಧದಲ್ಲಿ ಭಾರತೀಯ ಸೈನ್ಯವನ್ನು ಬ್ರಿಟೀಷರ ಪರವಾಗಿ ಹೋರಾಟಕ್ಕಿಳಿಸಿದ ಸಂದರ್ಭದಲ್ಲಿ, ನೇತಾಜಿಯವರು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಮತ್ತು ಜಪಾನಿನ ಸಹಕಾರದ ನಿರೀಕ್ಷೆಯಲ್ಲಿ ಅದೇ ಬ್ರಿಟೀಷರ ವಿರುದ್ಧ ಹೊಸ ಸೈನ್ಯ ಕಟ್ಟಿ ಹೋರಾಡುತ್ತಿದ್ದರು. ಬೋಸರ ಅತ್ಯಂತ ಉತ್ಸಾಹದ ಆದರೆ ಬಹುದೊಡ್ಡ ತಪ್ಪು ನಿರ್ಧಾರ ಇದಾಗಿತ್ತು.

ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ನಿಷ್ಕಲ್ಮಶ ಹೃದಯದ ನೇತಾಜಿಯವರ ಈ ನಿರ್ಧಾರ ಎಂದು ಸಮರ್ಥಿಸಬಹುದಾದರೂ, ಯಾವುದೇ ರೀತಿಯಾದರು ನಮಗೆ ಸ್ವಾತಂತ್ರ್ಯ ಲಭಿಸುವುದು ಮುಖ್ಯ ಎಂದು ಹೇಳಿಕೊಳ್ಳಬಹುದಾದರೂ, ವಿಶ್ವ ಕಂಡ ಅತ್ಯಂತ ಕ್ರೂರ ನರ ರಾಕ್ಷಸ ಹಿಟ್ಲರನ ಸಹಾಯ ಪಡೆಯಲು ಪ್ರಯತ್ನಿಸುವುದು ಅತ್ಯಂತ ಕೆಟ್ಟ ನಿರ್ಧಾರ, ಅಲ್ಲದೆ ಅಂದಿನ ಮಹಾಯುದ್ಧದ ಪ್ರಬಲ ಮಿತ್ರರಾಷ್ಟ್ರಗಳ ವಿರುದ್ಧದ ದುರ್ಬಲ ಶತ್ರು ರಾಷ್ಟ್ರಗಳ ಸೋಲು ಖಚಿತ ಎಂಬುದನ್ನು ಅರ್ಥಮಾಡಿಕೊಳ್ಳಲು ಸುಭಾಷರು ವಿಫಲರಾಗುತ್ತಾರೆ.

ಮನುಷ್ಯ ಸಹಜ ಅಹಂನಿಂದಾಗಿ ಗಾಂಧೀಜಿಯವರಿಗೆ ನೇತಾಜಿಯವರ ಬಗ್ಗೆ ಇದಕ್ಕಾಗಿ ಇನ್ನೂ ಹೆಚ್ಚಿನ ಬೇಸರ ಕೋಪ ಉಂಟು ಮಾಡಿರಬಹುದು. ಅಲ್ಲದೆ ಇದೇ ಸಮಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಮದ್ ಆಲಿ ಜಿನ್ನಾ ಅವರು ತಮ್ಮ ಸಮುದಾಯಗಳ ತುಳಿತಕ್ಕೊಳಗಾದ ಜನರ ಪರವಾಗಿ ದೇಶದ ಸ್ವಾತಂತ್ರ್ಯಕ್ಕಿಂತ ಹೆಚ್ಚಾಗಿ ತೊಡಗಿಸಿಕೊಂಡಿದ್ದರಿಂದ ಈ ಬೃಹತ್ ಹೋರಾಟದ ಒತ್ತಡ ಗಾಂಧಿಯವರಲ್ಲಿ ಸುಭಾಷರ ನಡೆಗಳು ಮತ್ತಷ್ಟು ಅಸಮಾಧಾನ ಸೃಷ್ಟಿಸಿರುವ ಸಾಧ್ಯತೆ ಇದೆ.

ಗಾಂಧಿ ಮತ್ತು ಭೋಸರ ನಡುವಿನ ಬಹುದೊಡ್ಡ ವ್ಯತ್ಯಾಸ…..

ಗಾಂಧಿ ” ಗುರಿ ಮತ್ತು ಮಾರ್ಗ ಎರಡೂ ಮುಖ್ಯ. ಉತ್ತಮ ಗುರಿ ತಲುಪಲು ಉತ್ತಮ ಮಾರ್ಗವೂ ಮುಖ್ಯ ”

ಭೋಸ್ ” ಉತ್ತಮ ಗುರಿಯ ಸಾಧನೆಗಾಗಿ ಮತ್ತು ನಮ್ಮ ರಕ್ಷಣೆಗಾಗಿ ಯಾವುದೇ ಮಾರ್ಗವಾದರೂ ಸರಿ. ಗುರಿ ತಲುಪುವುದು ಮುಖ್ಯ. ”

ಗಾಂಧಿಯ ಯಶಸ್ಸು ಭೋಸರ ವಿಫಲತೆ ಇಲ್ಲಿಯೇ ಅಡಗಿದೆ. ಮಾರ್ಗ ತಪ್ಪಾಗಿದ್ದರೆ ಗುರಿ ತಲುಪುವುದು ಕಷ್ಟ. ತಲುಪಿದರೂ ಅದು ತಾತ್ಕಾಲಿಕ ಮತ್ತು ದೀರ್ಘಕಾಲದಲ್ಲಿ ಅಪಾಯಕಾರಿ.

ಇತಿಹಾಸದ ಸತ್ಯಗಳು ಏನೇ ಇರಲಿ, ನೇತಾಜಿ ನೆಲದ – ಸ್ವಾಭಿಮಾನದ ರಕ್ಷಣೆಗಾಗಿ ಹೋರಾಡುವ ವಿಶ್ವದ ಎಲ್ಲ ಸಮುದಾಯಗಳ ಸ್ಪೂರ್ತಿಯ ಸಂಕೇತ.

ಆದರೆ ಬೋಸರ ದುರಾದೃಷ್ಟ ಕೇವಲ ಇಷ್ಟಕ್ಕೇ ನಿಲ್ಲುವುದಿಲ್ಲ. ವಿಧಿಯೂ ಕೂಡ ಅವರ ವಿರುಧ್ಧವಾಗಿ ನಡೆದು ವಿಮಾನ ಅಪಫಾತದಲ್ಲಿ ಅಕಾಲಿಕವಾಗಿ ನಿಧನರಾಗುತ್ತಾರೆ. ನಂತರ ಅವರ ಮನಸ್ಥಿತಿಗೆ ಒಂದಷ್ಟು ಭಿನ್ನರಾಗಿದ್ದ ಜವಹರಲಾಲ್ ನೆಹರು ದೇಶದ ಚುಕ್ಕಾಣಿ ಹಿಡಿಯುತ್ತಾರೆ. ಅವರೂ ನೇತಾಜಿಯವರ ಸಾಧನೆಗಳನ್ನು ನಿರ್ಲಕ್ಷಿಸುತ್ತಾರೆ.

ಇತಿಹಾಸ ಈ ರೀತಿಯ ಅನೇಕ ಘಟನೆಗಳನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡಿದೆ.

ನೇತಾಜಿಯವರ ಸಾವಿನ ಬಗ್ಗೆ ಅನೇಕ ಬಗೆಹರಿಯದ ಅನುಮಾನಗಳ ಹುತ್ತ ಕಟ್ಟಿಕೊಂಡಿದೆ. ಈಗಿನ ಸಂಕೀರ್ಣ ರಾಜಕೀಯ ಸಂದರ್ಭದಲ್ಲಿ ಅದಕ್ಕೆ ನಿಜವಾದ ಉತ್ತರ ಸಿಗುವುದಿಲ್ಲ. ಒಬ್ಬರಿಗೊಬ್ಬರ ಕೆಸರೆರಚಾಟದಲ್ಲಿ ಸತ್ಯ ಸಮಾಧಿಯಾಗಿದೆ. ಆದರೂ ಬದುಕಿನ ಅನುಭವದಿಂದ ಮತ್ತು ಆಗಿನ ಇತಿಹಾಸದ ಪುಟಗಳನ್ನು ಅವಲೋಕಿಸಿದಾಗ ಸಿಗುವ ಉತ್ತರ,
ಸುಭಾಷರು ಗೃಹ ಬಂಧನದಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿ ವಿಮಾನ ಅಪಘಾತದಲ್ಲಿ ಮೃತರಾದರು ಎಂಬುದು ಬಹುತೇಕ ಸತ್ಯ.

ಇದನ್ನು ಒಪ್ಪದವರ ಅತಿದೊಡ್ಡ ಅನುಮಾನ – ಊಹೆ ನೇತಾಜಿಯವರನ್ನು ಬ್ರಿಟೀಷರೆ ಮೋಸದಿಂದ ಕೊಲೆ ಮಾಡಿರಬಹುದು ಎಂದಾಗಬಹುದು. ಇದನ್ನು ಹೊರತುಪಡಿಸಿ ಬೋಸರು ಸ್ವಾತಂತ್ರ್ಯ ನಂತರವೂ ತಲೆ ಮರೆಸಿಕೊಂಡು ಬದುಕಿದ್ದರು, ನೆಹರು ಮತ್ತು ಬ್ರಿಟೀಷರ ಭಯದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿಲ್ಲ ಎಂಬುದು ಕಪೋಲಕಲ್ಪಿತ. ಈ ರೀತಿಯ ಅಭಿಪ್ರಾಯಗಳು ಧೀರೋದಾತ್ತ ಸಮರ ಸೇನಾನಿ ಸುಭಾಷ್ ಚಂದ್ರ ಬೋಸರಿಗೆ ನಾವು ಮಾಡುವ ಅವಮಾನವಾಗುತ್ತದೆ.
ಬ್ರಿಟಿಷರ ಆಡಳಿತಕ್ಕೆ ಹೆದರದ ನೇತಾಜಿ ನೆಹರು ಅವರಿಗೆ ಹೆದರುತ್ತಾರೆ ಎಂಬುದು ಹಾಸ್ಯಾಸ್ಪದ.

ಜನಪ್ರಿಯತೆಯನ್ನು ಪಕ್ಕಕ್ಕಿಟ್ಟು ವಾಸ್ತವವಾಗಿ ಯೋಚಿಸಿದರೆ ಮೃದು ಸ್ವಭಾವದವರಿಗೆ ಗಾಂಧಿಯ ಅಹಿಂಸೆ ಆದರ್ಶವಾದರೆ, ಆಕ್ರಮಣಕಾರಿ ಮನಸ್ಥಿತಿಯವರಿಗೆ ನೇತಾಜಿಯವರು ಕೆಚ್ಚದೆಯ ಹೋರಾಟ ಮಾರ್ಗದರ್ಶನವಾಗಿದೆ. ಮಾರ್ಗ ಭಿನ್ನವಾದರೂ ರಾಷ್ಟ್ರಪ್ರೇಮ ಮಾತ್ರ ಇಬ್ಬರಲ್ಲೂ ಅನುಕರಣೀಯ..

ನೇತಾಜಿ ನಿಮಗಿದೋ ಹುಟ್ಟುಹಬ್ಬದ ಶುಭಾಶಯಗಳು……………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

5 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

6 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

6 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

6 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

9 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

12 hours ago