ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ; ಬೆಂಬಲ ಯೋಜನೆಯಡಿ 50 ಕ್ವಿಂಟಾಲ್ ರಾಗಿ ಖರೀದಿ; ನೇಕಾರರ ಮಗ್ಗಗಳಿಗೆ 20 ಹೆಚ್.ಪಿವರೆಗೂ ಉಚಿತ ವಿದ್ಯುತ್ ನೀಡುತ್ತವೆ ಎಂದು ಸಿದ್ದರಾಮಯ್ಯ ಘೋಷಣೆ

ಜನರ ಮುಂದೆ ಬಿಜೆಪಿಯ ಕರ್ಮಕಾಂಡಗಳನ್ನು ಬಿಚ್ಚಿಡುತ್ತಿದ್ದೇವೆ. ಇದಕ್ಕೆ ಬಿಜೆಪಿ ಸರಕಾರದ ಪಾಪದ ಪುರಾಣ ಎಂದು ಹೆಸರಿಟ್ಟಿದ್ದೇವೆ. ಬಿಜೆಪಿ ಅವರು ಸತ್ಯ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಾನು 5 ವರ್ಷ ಸಿಎಂ ಆಗಿದ್ದಾಗ ಬಿಜೆಪಿ ಅಧಿಕೃತ ವಿರೋಧ ಪಕ್ಷದಲ್ಲಿ ಇದ್ದರು. ಆಗ ಒಂದು ದಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಏನು ಬಾಯಲ್ಲಿ ಕಲ್ಲು ಸಿಕ್ಕಾಕೊಂಡಿತ್ತಾ..? ಯಾಕೆ ಆಗ ಪ್ರಶ್ನೆ ಮಾಡಲಿಲ್ಲ ಮಿಸ್ಟರ್ ಬಸವರಾಜು ಬೊಮ್ಮಾಯಿ.? ಎಂದು ಪ್ರಶ್ನಿಸಿದರು. ಈಗ ಸುಳ್ಳನ್ನು ಹೇಳಲು ಆರಂಭಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರು ಇದ್ದಂತೆ. ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಅವರಿಗೆ ಶಕ್ತಿ ಇಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಬಾಲ, ಬಿಜೆಪಿ ಬಂದರೆ ಬಿಜೆಪಿ ಬಾಲ ಹಿಡಿಯುತ್ತಾರೆ.
ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. 2 ವರ್ಷ 10 ತಿಂಗಳು ಮುಖ್ಯಮಂತ್ರಿ ಆಗಿದ್ದೀರಿ. ಆಗ ಪಂಚರತ್ನ ನೆನಪಗಲಿಲ್ಲವೆ. ಎಲೆಕ್ಷನ್ ಬಂದಾಗ ಮಾತ್ರ ಪಂಚರತ್ನ ನೆನಪಾಯ್ತಾ? ಕಳೆದ ಚುನಾವಣೆಯಲ್ಲಿ ನಾವು ಸಿಎಂ ಮಾಡಿದೇವು, ಕೊಟ್ಟ ಕುದುರೆಯನ್ನು ಏರಲಾದವನು ಧೀರನು ಅಲ್ಲ, ಶೂರನು ಅಲ್ಲ, ಎಂಬಂತೆ ಕುಮಾರಸ್ವಾಮಿ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಬಿಜೆಪಿ ಅವರು ಜನರ ಆಶೀರ್ವಾದ ಪಡದು ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ಹಣ ಖರ್ಚು ಮಾಡಿ ಶಾಸಕರನ್ನ ಖರೀದ ಮಾಡಿ ನಮ್ಮಿಂದ 14 ಜನ ಶಾಸಕರನ್ನು, ಜೆಡಿಎಸ್ ನಿಂದ 3 ಜನ ಶಾಸಕರನ್ನ ಖರೀದಿ ಮಾಡಿ ಅನೈತಿಕವಾಗಿ ಸರ್ಕಾರ ರಚಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ 1600 ಕೋಟಿ ಅನುದಾನ ನೀಡಿದ್ದೆ. ದೊಡ್ಡಬಳ್ಳಾಪುರಕ್ಕೆ 32 ಸಾವಿರ ಮನೆಗಳನ್ನು ಕೊಟ್ಡಿದ್ದೇನೆ. ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆ. ನೇಕಾರರಿಗೆ 20 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದೆ. ಬಿಜೆಪಿ ಅವರು 5 ಹೆಚ್ಪಿ ಇಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮತ್ತೆ 20 ಹೆಚ್.ಪಿಗೆ ಏರಿಕೆ ಮಾಡುತ್ತೇವೆ‌ ಎಂದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

3 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

16 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

19 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

21 hours ago