ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ; ಬೆಂಬಲ ಯೋಜನೆಯಡಿ 50 ಕ್ವಿಂಟಾಲ್ ರಾಗಿ ಖರೀದಿ; ನೇಕಾರರ ಮಗ್ಗಗಳಿಗೆ 20 ಹೆಚ್.ಪಿವರೆಗೂ ಉಚಿತ ವಿದ್ಯುತ್ ನೀಡುತ್ತವೆ ಎಂದು ಸಿದ್ದರಾಮಯ್ಯ ಘೋಷಣೆ

ಜನರ ಮುಂದೆ ಬಿಜೆಪಿಯ ಕರ್ಮಕಾಂಡಗಳನ್ನು ಬಿಚ್ಚಿಡುತ್ತಿದ್ದೇವೆ. ಇದಕ್ಕೆ ಬಿಜೆಪಿ ಸರಕಾರದ ಪಾಪದ ಪುರಾಣ ಎಂದು ಹೆಸರಿಟ್ಟಿದ್ದೇವೆ. ಬಿಜೆಪಿ ಅವರು ಸತ್ಯ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಾನು 5 ವರ್ಷ ಸಿಎಂ ಆಗಿದ್ದಾಗ ಬಿಜೆಪಿ ಅಧಿಕೃತ ವಿರೋಧ ಪಕ್ಷದಲ್ಲಿ ಇದ್ದರು. ಆಗ ಒಂದು ದಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಏನು ಬಾಯಲ್ಲಿ ಕಲ್ಲು ಸಿಕ್ಕಾಕೊಂಡಿತ್ತಾ..? ಯಾಕೆ ಆಗ ಪ್ರಶ್ನೆ ಮಾಡಲಿಲ್ಲ ಮಿಸ್ಟರ್ ಬಸವರಾಜು ಬೊಮ್ಮಾಯಿ.? ಎಂದು ಪ್ರಶ್ನಿಸಿದರು. ಈಗ ಸುಳ್ಳನ್ನು ಹೇಳಲು ಆರಂಭಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರು ಇದ್ದಂತೆ. ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಅವರಿಗೆ ಶಕ್ತಿ ಇಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಬಾಲ, ಬಿಜೆಪಿ ಬಂದರೆ ಬಿಜೆಪಿ ಬಾಲ ಹಿಡಿಯುತ್ತಾರೆ.
ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. 2 ವರ್ಷ 10 ತಿಂಗಳು ಮುಖ್ಯಮಂತ್ರಿ ಆಗಿದ್ದೀರಿ. ಆಗ ಪಂಚರತ್ನ ನೆನಪಗಲಿಲ್ಲವೆ. ಎಲೆಕ್ಷನ್ ಬಂದಾಗ ಮಾತ್ರ ಪಂಚರತ್ನ ನೆನಪಾಯ್ತಾ? ಕಳೆದ ಚುನಾವಣೆಯಲ್ಲಿ ನಾವು ಸಿಎಂ ಮಾಡಿದೇವು, ಕೊಟ್ಟ ಕುದುರೆಯನ್ನು ಏರಲಾದವನು ಧೀರನು ಅಲ್ಲ, ಶೂರನು ಅಲ್ಲ, ಎಂಬಂತೆ ಕುಮಾರಸ್ವಾಮಿ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಬಿಜೆಪಿ ಅವರು ಜನರ ಆಶೀರ್ವಾದ ಪಡದು ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ಹಣ ಖರ್ಚು ಮಾಡಿ ಶಾಸಕರನ್ನ ಖರೀದ ಮಾಡಿ ನಮ್ಮಿಂದ 14 ಜನ ಶಾಸಕರನ್ನು, ಜೆಡಿಎಸ್ ನಿಂದ 3 ಜನ ಶಾಸಕರನ್ನ ಖರೀದಿ ಮಾಡಿ ಅನೈತಿಕವಾಗಿ ಸರ್ಕಾರ ರಚಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ 1600 ಕೋಟಿ ಅನುದಾನ ನೀಡಿದ್ದೆ. ದೊಡ್ಡಬಳ್ಳಾಪುರಕ್ಕೆ 32 ಸಾವಿರ ಮನೆಗಳನ್ನು ಕೊಟ್ಡಿದ್ದೇನೆ. ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆ. ನೇಕಾರರಿಗೆ 20 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದೆ. ಬಿಜೆಪಿ ಅವರು 5 ಹೆಚ್ಪಿ ಇಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮತ್ತೆ 20 ಹೆಚ್.ಪಿಗೆ ಏರಿಕೆ ಮಾಡುತ್ತೇವೆ‌ ಎಂದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

7 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

24 hours ago