ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ; ಬೆಂಬಲ ಯೋಜನೆಯಡಿ 50 ಕ್ವಿಂಟಾಲ್ ರಾಗಿ ಖರೀದಿ; ನೇಕಾರರ ಮಗ್ಗಗಳಿಗೆ 20 ಹೆಚ್.ಪಿವರೆಗೂ ಉಚಿತ ವಿದ್ಯುತ್ ನೀಡುತ್ತವೆ ಎಂದು ಸಿದ್ದರಾಮಯ್ಯ ಘೋಷಣೆ

ಜನರ ಮುಂದೆ ಬಿಜೆಪಿಯ ಕರ್ಮಕಾಂಡಗಳನ್ನು ಬಿಚ್ಚಿಡುತ್ತಿದ್ದೇವೆ. ಇದಕ್ಕೆ ಬಿಜೆಪಿ ಸರಕಾರದ ಪಾಪದ ಪುರಾಣ ಎಂದು ಹೆಸರಿಟ್ಟಿದ್ದೇವೆ. ಬಿಜೆಪಿ ಅವರು ಸತ್ಯ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಾನು 5 ವರ್ಷ ಸಿಎಂ ಆಗಿದ್ದಾಗ ಬಿಜೆಪಿ ಅಧಿಕೃತ ವಿರೋಧ ಪಕ್ಷದಲ್ಲಿ ಇದ್ದರು. ಆಗ ಒಂದು ದಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಏನು ಬಾಯಲ್ಲಿ ಕಲ್ಲು ಸಿಕ್ಕಾಕೊಂಡಿತ್ತಾ..? ಯಾಕೆ ಆಗ ಪ್ರಶ್ನೆ ಮಾಡಲಿಲ್ಲ ಮಿಸ್ಟರ್ ಬಸವರಾಜು ಬೊಮ್ಮಾಯಿ.? ಎಂದು ಪ್ರಶ್ನಿಸಿದರು. ಈಗ ಸುಳ್ಳನ್ನು ಹೇಳಲು ಆರಂಭಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರು ಇದ್ದಂತೆ. ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಅವರಿಗೆ ಶಕ್ತಿ ಇಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಬಾಲ, ಬಿಜೆಪಿ ಬಂದರೆ ಬಿಜೆಪಿ ಬಾಲ ಹಿಡಿಯುತ್ತಾರೆ.
ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. 2 ವರ್ಷ 10 ತಿಂಗಳು ಮುಖ್ಯಮಂತ್ರಿ ಆಗಿದ್ದೀರಿ. ಆಗ ಪಂಚರತ್ನ ನೆನಪಗಲಿಲ್ಲವೆ. ಎಲೆಕ್ಷನ್ ಬಂದಾಗ ಮಾತ್ರ ಪಂಚರತ್ನ ನೆನಪಾಯ್ತಾ? ಕಳೆದ ಚುನಾವಣೆಯಲ್ಲಿ ನಾವು ಸಿಎಂ ಮಾಡಿದೇವು, ಕೊಟ್ಟ ಕುದುರೆಯನ್ನು ಏರಲಾದವನು ಧೀರನು ಅಲ್ಲ, ಶೂರನು ಅಲ್ಲ, ಎಂಬಂತೆ ಕುಮಾರಸ್ವಾಮಿ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಬಿಜೆಪಿ ಅವರು ಜನರ ಆಶೀರ್ವಾದ ಪಡದು ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ಹಣ ಖರ್ಚು ಮಾಡಿ ಶಾಸಕರನ್ನ ಖರೀದ ಮಾಡಿ ನಮ್ಮಿಂದ 14 ಜನ ಶಾಸಕರನ್ನು, ಜೆಡಿಎಸ್ ನಿಂದ 3 ಜನ ಶಾಸಕರನ್ನ ಖರೀದಿ ಮಾಡಿ ಅನೈತಿಕವಾಗಿ ಸರ್ಕಾರ ರಚಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ 1600 ಕೋಟಿ ಅನುದಾನ ನೀಡಿದ್ದೆ. ದೊಡ್ಡಬಳ್ಳಾಪುರಕ್ಕೆ 32 ಸಾವಿರ ಮನೆಗಳನ್ನು ಕೊಟ್ಡಿದ್ದೇನೆ. ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆ. ನೇಕಾರರಿಗೆ 20 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದೆ. ಬಿಜೆಪಿ ಅವರು 5 ಹೆಚ್ಪಿ ಇಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮತ್ತೆ 20 ಹೆಚ್.ಪಿಗೆ ಏರಿಕೆ ಮಾಡುತ್ತೇವೆ‌ ಎಂದರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago