ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ; ಬೆಂಬಲ ಯೋಜನೆಯಡಿ 50 ಕ್ವಿಂಟಾಲ್ ರಾಗಿ ಖರೀದಿ; ನೇಕಾರರ ಮಗ್ಗಗಳಿಗೆ 20 ಹೆಚ್.ಪಿವರೆಗೂ ಉಚಿತ ವಿದ್ಯುತ್ ನೀಡುತ್ತವೆ ಎಂದು ಸಿದ್ದರಾಮಯ್ಯ ಘೋಷಣೆ

ಜನರ ಮುಂದೆ ಬಿಜೆಪಿಯ ಕರ್ಮಕಾಂಡಗಳನ್ನು ಬಿಚ್ಚಿಡುತ್ತಿದ್ದೇವೆ. ಇದಕ್ಕೆ ಬಿಜೆಪಿ ಸರಕಾರದ ಪಾಪದ ಪುರಾಣ ಎಂದು ಹೆಸರಿಟ್ಟಿದ್ದೇವೆ. ಬಿಜೆಪಿ ಅವರು ಸತ್ಯ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಾನು 5 ವರ್ಷ ಸಿಎಂ ಆಗಿದ್ದಾಗ ಬಿಜೆಪಿ ಅಧಿಕೃತ ವಿರೋಧ ಪಕ್ಷದಲ್ಲಿ ಇದ್ದರು. ಆಗ ಒಂದು ದಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಏನು ಬಾಯಲ್ಲಿ ಕಲ್ಲು ಸಿಕ್ಕಾಕೊಂಡಿತ್ತಾ..? ಯಾಕೆ ಆಗ ಪ್ರಶ್ನೆ ಮಾಡಲಿಲ್ಲ ಮಿಸ್ಟರ್ ಬಸವರಾಜು ಬೊಮ್ಮಾಯಿ.? ಎಂದು ಪ್ರಶ್ನಿಸಿದರು. ಈಗ ಸುಳ್ಳನ್ನು ಹೇಳಲು ಆರಂಭಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರು ಇದ್ದಂತೆ. ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಅವರಿಗೆ ಶಕ್ತಿ ಇಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಬಾಲ, ಬಿಜೆಪಿ ಬಂದರೆ ಬಿಜೆಪಿ ಬಾಲ ಹಿಡಿಯುತ್ತಾರೆ.
ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. 2 ವರ್ಷ 10 ತಿಂಗಳು ಮುಖ್ಯಮಂತ್ರಿ ಆಗಿದ್ದೀರಿ. ಆಗ ಪಂಚರತ್ನ ನೆನಪಗಲಿಲ್ಲವೆ. ಎಲೆಕ್ಷನ್ ಬಂದಾಗ ಮಾತ್ರ ಪಂಚರತ್ನ ನೆನಪಾಯ್ತಾ? ಕಳೆದ ಚುನಾವಣೆಯಲ್ಲಿ ನಾವು ಸಿಎಂ ಮಾಡಿದೇವು, ಕೊಟ್ಟ ಕುದುರೆಯನ್ನು ಏರಲಾದವನು ಧೀರನು ಅಲ್ಲ, ಶೂರನು ಅಲ್ಲ, ಎಂಬಂತೆ ಕುಮಾರಸ್ವಾಮಿ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಬಿಜೆಪಿ ಅವರು ಜನರ ಆಶೀರ್ವಾದ ಪಡದು ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ಹಣ ಖರ್ಚು ಮಾಡಿ ಶಾಸಕರನ್ನ ಖರೀದ ಮಾಡಿ ನಮ್ಮಿಂದ 14 ಜನ ಶಾಸಕರನ್ನು, ಜೆಡಿಎಸ್ ನಿಂದ 3 ಜನ ಶಾಸಕರನ್ನ ಖರೀದಿ ಮಾಡಿ ಅನೈತಿಕವಾಗಿ ಸರ್ಕಾರ ರಚಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ 1600 ಕೋಟಿ ಅನುದಾನ ನೀಡಿದ್ದೆ. ದೊಡ್ಡಬಳ್ಳಾಪುರಕ್ಕೆ 32 ಸಾವಿರ ಮನೆಗಳನ್ನು ಕೊಟ್ಡಿದ್ದೇನೆ. ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆ. ನೇಕಾರರಿಗೆ 20 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದೆ. ಬಿಜೆಪಿ ಅವರು 5 ಹೆಚ್ಪಿ ಇಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮತ್ತೆ 20 ಹೆಚ್.ಪಿಗೆ ಏರಿಕೆ ಮಾಡುತ್ತೇವೆ‌ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago