ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ; ಬೆಂಬಲ ಯೋಜನೆಯಡಿ 50 ಕ್ವಿಂಟಾಲ್ ರಾಗಿ ಖರೀದಿ; ನೇಕಾರರ ಮಗ್ಗಗಳಿಗೆ 20 ಹೆಚ್.ಪಿವರೆಗೂ ಉಚಿತ ವಿದ್ಯುತ್ ನೀಡುತ್ತವೆ ಎಂದು ಸಿದ್ದರಾಮಯ್ಯ ಘೋಷಣೆ

ಜನರ ಮುಂದೆ ಬಿಜೆಪಿಯ ಕರ್ಮಕಾಂಡಗಳನ್ನು ಬಿಚ್ಚಿಡುತ್ತಿದ್ದೇವೆ. ಇದಕ್ಕೆ ಬಿಜೆಪಿ ಸರಕಾರದ ಪಾಪದ ಪುರಾಣ ಎಂದು ಹೆಸರಿಟ್ಟಿದ್ದೇವೆ. ಬಿಜೆಪಿ ಅವರು ಸತ್ಯ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಾನು 5 ವರ್ಷ ಸಿಎಂ ಆಗಿದ್ದಾಗ ಬಿಜೆಪಿ ಅಧಿಕೃತ ವಿರೋಧ ಪಕ್ಷದಲ್ಲಿ ಇದ್ದರು. ಆಗ ಒಂದು ದಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಏನು ಬಾಯಲ್ಲಿ ಕಲ್ಲು ಸಿಕ್ಕಾಕೊಂಡಿತ್ತಾ..? ಯಾಕೆ ಆಗ ಪ್ರಶ್ನೆ ಮಾಡಲಿಲ್ಲ ಮಿಸ್ಟರ್ ಬಸವರಾಜು ಬೊಮ್ಮಾಯಿ.? ಎಂದು ಪ್ರಶ್ನಿಸಿದರು. ಈಗ ಸುಳ್ಳನ್ನು ಹೇಳಲು ಆರಂಭಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರು ಇದ್ದಂತೆ. ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಅವರಿಗೆ ಶಕ್ತಿ ಇಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಬಾಲ, ಬಿಜೆಪಿ ಬಂದರೆ ಬಿಜೆಪಿ ಬಾಲ ಹಿಡಿಯುತ್ತಾರೆ.
ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. 2 ವರ್ಷ 10 ತಿಂಗಳು ಮುಖ್ಯಮಂತ್ರಿ ಆಗಿದ್ದೀರಿ. ಆಗ ಪಂಚರತ್ನ ನೆನಪಗಲಿಲ್ಲವೆ. ಎಲೆಕ್ಷನ್ ಬಂದಾಗ ಮಾತ್ರ ಪಂಚರತ್ನ ನೆನಪಾಯ್ತಾ? ಕಳೆದ ಚುನಾವಣೆಯಲ್ಲಿ ನಾವು ಸಿಎಂ ಮಾಡಿದೇವು, ಕೊಟ್ಟ ಕುದುರೆಯನ್ನು ಏರಲಾದವನು ಧೀರನು ಅಲ್ಲ, ಶೂರನು ಅಲ್ಲ, ಎಂಬಂತೆ ಕುಮಾರಸ್ವಾಮಿ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಬಿಜೆಪಿ ಅವರು ಜನರ ಆಶೀರ್ವಾದ ಪಡದು ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ಹಣ ಖರ್ಚು ಮಾಡಿ ಶಾಸಕರನ್ನ ಖರೀದ ಮಾಡಿ ನಮ್ಮಿಂದ 14 ಜನ ಶಾಸಕರನ್ನು, ಜೆಡಿಎಸ್ ನಿಂದ 3 ಜನ ಶಾಸಕರನ್ನ ಖರೀದಿ ಮಾಡಿ ಅನೈತಿಕವಾಗಿ ಸರ್ಕಾರ ರಚಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ 1600 ಕೋಟಿ ಅನುದಾನ ನೀಡಿದ್ದೆ. ದೊಡ್ಡಬಳ್ಳಾಪುರಕ್ಕೆ 32 ಸಾವಿರ ಮನೆಗಳನ್ನು ಕೊಟ್ಡಿದ್ದೇನೆ. ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆ. ನೇಕಾರರಿಗೆ 20 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದೆ. ಬಿಜೆಪಿ ಅವರು 5 ಹೆಚ್ಪಿ ಇಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮತ್ತೆ 20 ಹೆಚ್.ಪಿಗೆ ಏರಿಕೆ ಮಾಡುತ್ತೇವೆ‌ ಎಂದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago