ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago