ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.
ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.
ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.
ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…