ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago