ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 hour ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

5 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

20 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

23 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago