ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದು ಹೇಳಿದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

10 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

19 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

20 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago