Categories: ಲೇಖನ

ನಾವು ಬದಲಾದರೆ ಜಗತ್ತೇ ಬದಲಾಗುತ್ತದೆ, ಇದು ಪ್ರಾಯೋಗಿಕವೇ ?….. ಒಂದು ಆತ್ಮಾವಲೋಕನ……

ಅಪ್ಪ ಹೇಳುತ್ತಿದ್ದರು,

ಬೇಡುವ ಕೈ ನಿನ್ನದಾಗುವುದು ಬೇಡ,
ಕೊಡುವ ಕೈ ನಿನ್ನದಾಗಲಿ…..

ಅಮ್ಮ ಹೇಳುತ್ತಿದ್ದರು,
ಅವಮಾನ ಸಹಿಸಬೇಡ,
ಸ್ವಾಭಿಮಾನದ ಬದುಕು ನಿನ್ನದಾಗಲಿ,….

ಗುರುಗಳು ಹೇಳುತ್ತಿದ್ದರು,
ದೇಶದ್ರೋಹಿ ಸ್ವಾರ್ಥಿ ಆಗಬೇಡ,
ದೇಶಪ್ರೇಮಿ ತ್ಯಾಗ ಜೀವಿ ನೀನಾಗು……

ಮಾರ್ಗದರ್ಶಿಗಳು – ಹಿತೈಷಿಗಳು ಹೇಳುತ್ತಿದ್ದರು,
ದ್ವೇಷ ಭಾವನೆ ತೊಡೆದು ಹಾಕು,
ಪ್ರೀತಿಯ ಭಾಷೆ ನಿನ್ನದಾಗಲಿ…..

ನೀತಿ ಕಥೆಗಳಲ್ಲಿ ಓದುತ್ತಿದ್ದೆ,
ಪರರ ಸ್ವತ್ತು, ಪರ ಸ್ತ್ರೀ ಮೇಲಿನ ಮೋಹ,
ಅನೈತಿಕ, ಅಸಹ್ಯಕ್ಕೆ ಸಮಾನ,
ದುಡಿದ ಶ್ರಮದ ಫಲ ಮಾತ್ರ ನಿನ್ನದಾಗಲಿ……

ಹಿರಿಯರು ಹೇಳುತ್ತಿದ್ದರು,
ಮೋಸ ವಂಚನೆ ಕಳ್ಳತನ ನಿನ್ನ ಬಳಿ ಸುಳಿಯದಿರಲಿ,
ಸ್ನೇಹ ವಿಶ್ವಾಸ ತಾಳ್ಮೆ ನಿನ್ನಿಂದ ಅಳಿಯದಿರಲಿ……

ಪುಸ್ತಕಗಳಲ್ಲಿ ಬರೆದಿದ್ದರು,
ನಿನ್ನಲ್ಲಿರುವ ಹಣ ಆಸ್ತಿ ಯಾವಾಗ ಬೇಕಾದರೂ ನಾಶವಾಗಬಹುದು.
ಆದರೆ, ನೀನು ಕಲಿತಿರುವ ವಿದ್ಯೆ ನಿನ್ನನ್ನು ಕೊನೆಯವರೆಗೂ ಕಾಪಾಡುತ್ತದೆ……

ಈಗಲೂ ಇದು ಪ್ರಸ್ತುತವೇ ?
ನಮ್ಮ ಮಕ್ಕಳಿಗೆ ಇದನ್ನು ಈಗಲೂ ಕಲಿಸುತ್ತಿದ್ದೇವೆಯೇ ?
ಇದು ಸಾರ್ವಕಾಲಿಕ ಸತ್ಯವೇ ?
ಬದಲಾವಣೆ ಅವಶ್ಯವೇ ?
ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇದನ್ನು ನಮ್ಮ ಮಕ್ಕಳಿಗೆ ಕಲಿಸುವುದರಿಂದ ಅವರಿಗೆ ಯಶಸ್ಸು ಸಿಗುವುದೆ ? ಅಥವಾ ವಾಸ್ತವದಲ್ಲಿ ಗೊಂದಲಕ್ಕೆ ಒಳಗಾಗುವರೆ ?,……

ಒಳ್ಳೆಯ ಮನಸ್ಸಿನವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತದೆ. ನಿಜವೇ?…..,

ನಾವು ಏನು ದಾನ ಮಾಡುತ್ತೇವೆಯೋ ಅದರ ಎರಡು ಪಟ್ಟು ನಮಗೆ ವಾಪಸ್ಸು ಬರುತ್ತದೆ,
ಸತ್ಯವೆ ?…..,

ಒಳ್ಳೆಯವರಿಗೆ ಒಳ್ಳೆಯದು ಕೆಟ್ಟವರಿಗೆ ಕೆಟ್ಟದ್ದು ಆಗುತ್ತದೆ. ವಾಸ್ತವವೇ ?……,

ನಾವು ಬದಲಾದರೆ ಜಗತ್ತೇ ಬದಲಾಗುತ್ತದೆ, ಇದು ಪ್ರಾಯೋಗಿಕವೇ ?…..,

ಇಂದಿನ ಎಲ್ಲಾ ಕಷ್ಟ ಸುಖಗಳಿಗೂ ಹಿಂದಿನ ಜನ್ಮದ ಪಾಪ ಪುಣ್ಯಗಳೇ ಕಾರಣ ನಂಬಬಹುದೇ ?…..,

ಗಂಡು ಹೆಣ್ಣಿನ ಸಂಬಂಧ ಪೂರ್ವ ನಿಯೋಜಿತ ಋಣಾನುಬಂಧ, ಸರಿಯೇ ?…..,

ಗಂಡ ಹೆಂಡತಿ ಸಂಬಂಧ ಏಳು ಜನುಮಗಳ ಅನುಭಂದ, ಹೌದೇ ?…..,

ಅನ್ನದ ಪ್ರತಿ ಅಗುಳಿನ ಮೇಲೂ ತಿನ್ನುವವನ ಹೆಸರು ಬರೆದಿರುತ್ತದೆ, ಗೊತ್ತೇ ?…..,

ಅಪಘಾತ, ಆಕಸ್ಮಿಕ, ಅನಾರೋಗ್ಯದ ಸಾವು ನಮ್ಮ ಹಣೆಬರಹ, ಒಪ್ಪೋಣವೇ ?……,

ಬದುಕಿನ ಎಲ್ಲಾ ಘಟನೆಗಳೂ ಪೂರ್ವ ನಿರ್ಧಾರಿತ, ಪ್ರಶ್ನಿಸಬಾರದೇ ?…….,

ನಮ್ಮನ್ನು ಕಾಡುವ ಈ ಮನಸ್ಥಿತಿಗೆ ಸಮಾಧಾನಕರ ಉತ್ತರಬೇಕಿದೆ……………

ಹೊಟ್ಟೆ ತುಂಬಿದ ಶ್ರೀಮಂತರು,
ವೇದಾಧ್ಯಯನ ಪಂಡಿತರು,
ಬೈಬಲ್ ಪ್ರಚಾರಕರು,
ಖುರಾನ್ ಆರಾಧಕರು,
ವಿಭೂತಿ ಮಠಾಧೀಶರು,
ಪುನರ್ಜನ್ಮ ಸೃಷ್ಟಿಕರ್ತರು,
ಜ್ಯೋತಿಷಿಗಳು,
ವಿಚಾರವಾದಿಗಳು,
ವಿಜ್ಞಾನಿಗಳ ಉತ್ತರಗಳು ನನಗೆ ಬೇಡ,…..,

ಬೀದಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯಿಂದ ಉತ್ತರ ಬೇಕಿದೆ……,

ಹುತಾತ್ಮ ಯೋಧನ ಹೆಂಡತಿಯಿಂದ ಉತ್ತರ ಬೇಕಿದೆ,……,

ಆತ್ಮಹತ್ಯೆ ಮಾಡಿಕೊಂಡ ರೈತನ ಮಗನಿಂದ ಉತ್ತರ ಬೇಕಿದೆ,…..,

ಬಸ್ ನಿಲ್ದಾಣದಲ್ಲಿ ದಿನ ಕಳೆಯುವ ಅನಾಥನಿಂದ ಉತ್ತರ ಬೇಕಿದೆ,……,

ಗಂಡನಿಂದಲೇ ಏಡ್ಸ್ ಬಂದು ಈಗ ಆತನಿಂದಲೇ ಪರಿತ್ಯಕ್ತಳಾದ ಮಹಿಳೆಯಿಂದ ಉತ್ತರ ಬೇಕಿದೆ,…..,

ಮಾನವೀಯತೆಯಿಂದ ವಿಧುವೆಗೆ ಬದುಕು ನೀಡಿ ಈಗ ವರದಕ್ಷಿಣೆ ಆರೋಪದಲ್ಲಿ ಜೈಲಿನಲ್ಲಿ ದಿನದೂಡುತ್ತಿರುವ ಯುವಕನಿಂದ ಉತ್ತರ ಬೇಕಿದೆ,….,

ತನ್ನದೆಲ್ಲವನ್ನೂ ಗಲಭೆಯಲ್ಲಿ ಕಳೆದುಕೊಂಡ ವ್ಯಕ್ತಿಯ ಉತ್ತರ ಬೇಕಿದೆ,…..,

ತಮ್ಮ ಸರ್ವಸ್ವವನ್ನೂ ತಮ್ಮ ನಾಲ್ಕು ಮಕ್ಕಳಿಗಾಗಿ ತ್ಯಾಗಮಾಡಿ ಈಗ ಅವರಿಂದ ತಿರಸ್ಕೃತರಾಗಿ ವೃಧ್ಧಾಶ್ರಮದಲ್ಲಿ ಬದುಕುತ್ತಿರುವ ತಂದೆಯಿಂದ ಉತ್ತರ ಬೇಕಿದೆ,….,

ಪ್ರಾಮಾಣಿಕರಾಗಿದ್ದುದರಿಂಲೇ ತನ್ನ ಸಹಚರರಿಂದ ಕಿರುಕುಳಕ್ಕೊಳಗಾಗಿ ಸೇವೆಯಿಂದ ವಜಾಗೊಂಡ ಸರ್ಕಾರಿ ಅಧಿಕಾರಿಯಿಂದ ಉತ್ತರ ಬೇಕಿದೆ,……,

ಅವರ ಉತ್ತರಗಳು ಆಶಾದಾಯಕವಾಗಿದ್ದರೆ ಇವನ್ನೆಲ್ಲಾ ಮತ್ತೊಮ್ಮೆ ವಾಸ್ತವದ ವಿಮರ್ಶೆಗೊಳಪಡಿಸಬಹುದು……,

ಇಲ್ಲದಿದ್ದರೆ ಇನ್ನೆಷ್ಟು ದಿನ ಈ ಭ್ರಮೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯುವುದು……,

ಅಥವಾ,

ಮೇಲೆ ಹೇಳಿದ ಎಲ್ಲವೂ ಸತ್ಯ. ನಿಮಗೆ ತಿಳಿವಳಿಕೆಯ ಕೊರತೆಯಿದೆ ಎನ್ನುವುದಾದರೆ ನಿಮಗೆ ಧನ್ಯವಾದಗಳು….

ನಿಮ್ಮ ಅದೃಷ್ಟ ನಮಗಿಲ್ಲ….

ಒಳ್ಳೆಯದೆಲ್ಲವೂ ಒಳ್ಳೆಯದಾಗಿ ಇನ್ನೂ ಉಳಿದಿದೆಯೇ ?….,

ಮೌಲ್ಯಗಳ ಪುನರ್ ಸ್ಥಾಪನೆಗಾಗಿ ಮಕ್ಕಳಿಗೆ ನಾವು ನೈತಿಕ ಶಿಕ್ಷಣದ ಪಾಠಗಳಲ್ಲಿ ಏನು ಹೇಳಿಕೊಡಬೇಕು ?…..,

ಹಳೆಯದು ಮತ್ತು ಹೊಸದರ ಸಮ್ಮಿಲನ ಸಾಧಿಸುವುದು ಹೇಗೆ ?,…….,

ಈ ಪ್ರಶ್ನೆಗಳಿಗೆ ಉತ್ತರ ಹುಡುಕುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಸಾಗಲಿ……,

ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಇದು ಅತ್ಯವಶ್ಯ………………,

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

7 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

11 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

11 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

19 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago