Categories: ಲೇಖನ

ನಾವು ಬದಲಾದರೆ ಜಗತ್ತೇ ಬದಲಾಗುತ್ತದೆ, ಇದು ಪ್ರಾಯೋಗಿಕವೇ ?….. ಒಂದು ಆತ್ಮಾವಲೋಕನ……

ಅಪ್ಪ ಹೇಳುತ್ತಿದ್ದರು,

ಬೇಡುವ ಕೈ ನಿನ್ನದಾಗುವುದು ಬೇಡ,
ಕೊಡುವ ಕೈ ನಿನ್ನದಾಗಲಿ…..

ಅಮ್ಮ ಹೇಳುತ್ತಿದ್ದರು,
ಅವಮಾನ ಸಹಿಸಬೇಡ,
ಸ್ವಾಭಿಮಾನದ ಬದುಕು ನಿನ್ನದಾಗಲಿ,….

ಗುರುಗಳು ಹೇಳುತ್ತಿದ್ದರು,
ದೇಶದ್ರೋಹಿ ಸ್ವಾರ್ಥಿ ಆಗಬೇಡ,
ದೇಶಪ್ರೇಮಿ ತ್ಯಾಗ ಜೀವಿ ನೀನಾಗು……

ಮಾರ್ಗದರ್ಶಿಗಳು – ಹಿತೈಷಿಗಳು ಹೇಳುತ್ತಿದ್ದರು,
ದ್ವೇಷ ಭಾವನೆ ತೊಡೆದು ಹಾಕು,
ಪ್ರೀತಿಯ ಭಾಷೆ ನಿನ್ನದಾಗಲಿ…..

ನೀತಿ ಕಥೆಗಳಲ್ಲಿ ಓದುತ್ತಿದ್ದೆ,
ಪರರ ಸ್ವತ್ತು, ಪರ ಸ್ತ್ರೀ ಮೇಲಿನ ಮೋಹ,
ಅನೈತಿಕ, ಅಸಹ್ಯಕ್ಕೆ ಸಮಾನ,
ದುಡಿದ ಶ್ರಮದ ಫಲ ಮಾತ್ರ ನಿನ್ನದಾಗಲಿ……

ಹಿರಿಯರು ಹೇಳುತ್ತಿದ್ದರು,
ಮೋಸ ವಂಚನೆ ಕಳ್ಳತನ ನಿನ್ನ ಬಳಿ ಸುಳಿಯದಿರಲಿ,
ಸ್ನೇಹ ವಿಶ್ವಾಸ ತಾಳ್ಮೆ ನಿನ್ನಿಂದ ಅಳಿಯದಿರಲಿ……

ಪುಸ್ತಕಗಳಲ್ಲಿ ಬರೆದಿದ್ದರು,
ನಿನ್ನಲ್ಲಿರುವ ಹಣ ಆಸ್ತಿ ಯಾವಾಗ ಬೇಕಾದರೂ ನಾಶವಾಗಬಹುದು.
ಆದರೆ, ನೀನು ಕಲಿತಿರುವ ವಿದ್ಯೆ ನಿನ್ನನ್ನು ಕೊನೆಯವರೆಗೂ ಕಾಪಾಡುತ್ತದೆ……

ಈಗಲೂ ಇದು ಪ್ರಸ್ತುತವೇ ?
ನಮ್ಮ ಮಕ್ಕಳಿಗೆ ಇದನ್ನು ಈಗಲೂ ಕಲಿಸುತ್ತಿದ್ದೇವೆಯೇ ?
ಇದು ಸಾರ್ವಕಾಲಿಕ ಸತ್ಯವೇ ?
ಬದಲಾವಣೆ ಅವಶ್ಯವೇ ?
ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇದನ್ನು ನಮ್ಮ ಮಕ್ಕಳಿಗೆ ಕಲಿಸುವುದರಿಂದ ಅವರಿಗೆ ಯಶಸ್ಸು ಸಿಗುವುದೆ ? ಅಥವಾ ವಾಸ್ತವದಲ್ಲಿ ಗೊಂದಲಕ್ಕೆ ಒಳಗಾಗುವರೆ ?,……

ಒಳ್ಳೆಯ ಮನಸ್ಸಿನವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತದೆ. ನಿಜವೇ?…..,

ನಾವು ಏನು ದಾನ ಮಾಡುತ್ತೇವೆಯೋ ಅದರ ಎರಡು ಪಟ್ಟು ನಮಗೆ ವಾಪಸ್ಸು ಬರುತ್ತದೆ,
ಸತ್ಯವೆ ?…..,

ಒಳ್ಳೆಯವರಿಗೆ ಒಳ್ಳೆಯದು ಕೆಟ್ಟವರಿಗೆ ಕೆಟ್ಟದ್ದು ಆಗುತ್ತದೆ. ವಾಸ್ತವವೇ ?……,

ನಾವು ಬದಲಾದರೆ ಜಗತ್ತೇ ಬದಲಾಗುತ್ತದೆ, ಇದು ಪ್ರಾಯೋಗಿಕವೇ ?…..,

ಇಂದಿನ ಎಲ್ಲಾ ಕಷ್ಟ ಸುಖಗಳಿಗೂ ಹಿಂದಿನ ಜನ್ಮದ ಪಾಪ ಪುಣ್ಯಗಳೇ ಕಾರಣ ನಂಬಬಹುದೇ ?…..,

ಗಂಡು ಹೆಣ್ಣಿನ ಸಂಬಂಧ ಪೂರ್ವ ನಿಯೋಜಿತ ಋಣಾನುಬಂಧ, ಸರಿಯೇ ?…..,

ಗಂಡ ಹೆಂಡತಿ ಸಂಬಂಧ ಏಳು ಜನುಮಗಳ ಅನುಭಂದ, ಹೌದೇ ?…..,

ಅನ್ನದ ಪ್ರತಿ ಅಗುಳಿನ ಮೇಲೂ ತಿನ್ನುವವನ ಹೆಸರು ಬರೆದಿರುತ್ತದೆ, ಗೊತ್ತೇ ?…..,

ಅಪಘಾತ, ಆಕಸ್ಮಿಕ, ಅನಾರೋಗ್ಯದ ಸಾವು ನಮ್ಮ ಹಣೆಬರಹ, ಒಪ್ಪೋಣವೇ ?……,

ಬದುಕಿನ ಎಲ್ಲಾ ಘಟನೆಗಳೂ ಪೂರ್ವ ನಿರ್ಧಾರಿತ, ಪ್ರಶ್ನಿಸಬಾರದೇ ?…….,

ನಮ್ಮನ್ನು ಕಾಡುವ ಈ ಮನಸ್ಥಿತಿಗೆ ಸಮಾಧಾನಕರ ಉತ್ತರಬೇಕಿದೆ……………

ಹೊಟ್ಟೆ ತುಂಬಿದ ಶ್ರೀಮಂತರು,
ವೇದಾಧ್ಯಯನ ಪಂಡಿತರು,
ಬೈಬಲ್ ಪ್ರಚಾರಕರು,
ಖುರಾನ್ ಆರಾಧಕರು,
ವಿಭೂತಿ ಮಠಾಧೀಶರು,
ಪುನರ್ಜನ್ಮ ಸೃಷ್ಟಿಕರ್ತರು,
ಜ್ಯೋತಿಷಿಗಳು,
ವಿಚಾರವಾದಿಗಳು,
ವಿಜ್ಞಾನಿಗಳ ಉತ್ತರಗಳು ನನಗೆ ಬೇಡ,…..,

ಬೀದಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯಿಂದ ಉತ್ತರ ಬೇಕಿದೆ……,

ಹುತಾತ್ಮ ಯೋಧನ ಹೆಂಡತಿಯಿಂದ ಉತ್ತರ ಬೇಕಿದೆ,……,

ಆತ್ಮಹತ್ಯೆ ಮಾಡಿಕೊಂಡ ರೈತನ ಮಗನಿಂದ ಉತ್ತರ ಬೇಕಿದೆ,…..,

ಬಸ್ ನಿಲ್ದಾಣದಲ್ಲಿ ದಿನ ಕಳೆಯುವ ಅನಾಥನಿಂದ ಉತ್ತರ ಬೇಕಿದೆ,……,

ಗಂಡನಿಂದಲೇ ಏಡ್ಸ್ ಬಂದು ಈಗ ಆತನಿಂದಲೇ ಪರಿತ್ಯಕ್ತಳಾದ ಮಹಿಳೆಯಿಂದ ಉತ್ತರ ಬೇಕಿದೆ,…..,

ಮಾನವೀಯತೆಯಿಂದ ವಿಧುವೆಗೆ ಬದುಕು ನೀಡಿ ಈಗ ವರದಕ್ಷಿಣೆ ಆರೋಪದಲ್ಲಿ ಜೈಲಿನಲ್ಲಿ ದಿನದೂಡುತ್ತಿರುವ ಯುವಕನಿಂದ ಉತ್ತರ ಬೇಕಿದೆ,….,

ತನ್ನದೆಲ್ಲವನ್ನೂ ಗಲಭೆಯಲ್ಲಿ ಕಳೆದುಕೊಂಡ ವ್ಯಕ್ತಿಯ ಉತ್ತರ ಬೇಕಿದೆ,…..,

ತಮ್ಮ ಸರ್ವಸ್ವವನ್ನೂ ತಮ್ಮ ನಾಲ್ಕು ಮಕ್ಕಳಿಗಾಗಿ ತ್ಯಾಗಮಾಡಿ ಈಗ ಅವರಿಂದ ತಿರಸ್ಕೃತರಾಗಿ ವೃಧ್ಧಾಶ್ರಮದಲ್ಲಿ ಬದುಕುತ್ತಿರುವ ತಂದೆಯಿಂದ ಉತ್ತರ ಬೇಕಿದೆ,….,

ಪ್ರಾಮಾಣಿಕರಾಗಿದ್ದುದರಿಂಲೇ ತನ್ನ ಸಹಚರರಿಂದ ಕಿರುಕುಳಕ್ಕೊಳಗಾಗಿ ಸೇವೆಯಿಂದ ವಜಾಗೊಂಡ ಸರ್ಕಾರಿ ಅಧಿಕಾರಿಯಿಂದ ಉತ್ತರ ಬೇಕಿದೆ,……,

ಅವರ ಉತ್ತರಗಳು ಆಶಾದಾಯಕವಾಗಿದ್ದರೆ ಇವನ್ನೆಲ್ಲಾ ಮತ್ತೊಮ್ಮೆ ವಾಸ್ತವದ ವಿಮರ್ಶೆಗೊಳಪಡಿಸಬಹುದು……,

ಇಲ್ಲದಿದ್ದರೆ ಇನ್ನೆಷ್ಟು ದಿನ ಈ ಭ್ರಮೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯುವುದು……,

ಅಥವಾ,

ಮೇಲೆ ಹೇಳಿದ ಎಲ್ಲವೂ ಸತ್ಯ. ನಿಮಗೆ ತಿಳಿವಳಿಕೆಯ ಕೊರತೆಯಿದೆ ಎನ್ನುವುದಾದರೆ ನಿಮಗೆ ಧನ್ಯವಾದಗಳು….

ನಿಮ್ಮ ಅದೃಷ್ಟ ನಮಗಿಲ್ಲ….

ಒಳ್ಳೆಯದೆಲ್ಲವೂ ಒಳ್ಳೆಯದಾಗಿ ಇನ್ನೂ ಉಳಿದಿದೆಯೇ ?….,

ಮೌಲ್ಯಗಳ ಪುನರ್ ಸ್ಥಾಪನೆಗಾಗಿ ಮಕ್ಕಳಿಗೆ ನಾವು ನೈತಿಕ ಶಿಕ್ಷಣದ ಪಾಠಗಳಲ್ಲಿ ಏನು ಹೇಳಿಕೊಡಬೇಕು ?…..,

ಹಳೆಯದು ಮತ್ತು ಹೊಸದರ ಸಮ್ಮಿಲನ ಸಾಧಿಸುವುದು ಹೇಗೆ ?,…….,

ಈ ಪ್ರಶ್ನೆಗಳಿಗೆ ಉತ್ತರ ಹುಡುಕುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಸಾಗಲಿ……,

ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಇದು ಅತ್ಯವಶ್ಯ………………,

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

16 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

18 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago