Categories: ಲೇಖನ

ನಾವು ಯಾರು….? ನಮ್ಮ ಯೋಗ್ಯತೆ ಏನು….?

ನಾವು ಯಾರು ? ನಮ್ಮ ಯೋಗ್ಯತೆ ಏನು ?………

ಕೆಲವರ ಬಗ್ಗೆ ಹಲವು ಉದಾಹರಣೆಗಳು…….

ಇದು ಆ ರೀತಿಯ ಜನಗಳಿಗೆ ಮಾತ್ರ ಅನ್ವಯ….

ಮೂಕ ಪ್ರಾಣಿಗಳಿಗೆ ಆಹಾರದಲ್ಲಿ ವಿಷವಿಕ್ಕುವ ಅನಾಗರಿಕರು ನಾವು ಅನಾಗರಿಕರು……….

ಅನ್ನಭಾಗ್ಯದ ಹಸಿದ ಹೊಟ್ಟೆಯ ಅಕ್ಕಿ ಕದಿಯುವ ಕಳ್ಳರು ನಾವು ಕಳ್ಳರು….

ಕೊರೋನಾ ಕಷ್ಟದ ಸಮಯದಲ್ಲಿ ವೆಂಟಿಲೇಟರ್ ಖರೀದಿಯಲ್ಲಿ ದುಡ್ಡು ಹೊಡೆಯುವ ನೀಚರು ನಾವು ನೀಚರು…..

ಬುದ್ಧಿಮಾಂದ್ಯ ಬೀದಿ ಹೆಣ್ಣಿನ ಅತ್ಯಾಚಾರ ಮಾಡುವ ಕೀಚಕರು ನಾವು ಕೀಚಕರು……

ವೃದ್ಧಾಪ್ಯದ ಪಿಂಚಣಿಯಲ್ಲಿ ಕಮೀಷನ್ ಹೊಡೆಯುವ ಕಿರಾತಕರು ನಾವು ಕಿರಾತಕರು……

ಡೆತ್ ಸರ್ಟಿಫಿಕೇಟ್ ನೀಡಲೂ ಲಂಚ ಪಡೆಯುವ ಭ್ರಷ್ಟರು ನಾವು ಭ್ರಷ್ಟರು……

ಗಂಡ ಹೆಂಡತಿಯ ಸ್ವಾರ್ಥಕ್ಕಾಗಿ ಹೆತ್ತವರನ್ನು ವೃದ್ದಾಶ್ರಮಕ್ಕೆ ಸೇರಿಸುವ ಕೊಳಕರು ನಾವು ಕೊಳಕರು……

ಹಣಕ್ಕಾಗಿ ಮನುಷ್ಯನ ಕಿಡ್ನಿಯನ್ನೇ ಕದಿಯುವ ಕಟುಕರು ನಾವು ಕಟುಕರು……

ಮೂರು ವರ್ಷದ ಹಸುಳೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡುವ ರಾಕ್ಷಸರು ನಾವು ರಾಕ್ಷಸರು……

ವೇಶ್ಯೆಯರ ಬಳಿಯೂ ಹಣ ಕೀಳುವ ತಲೆಹಿಡುಕರು ನಾವು ತಲೆಹಿಡುಕರು……

ಎಳೆಯ ಮಕ್ಕಳನ್ನು ದುಡಿಸಿಕೊಳ್ಳುವ ದುಷ್ಟರು ನಾವು ದುಷ್ಠರು…….

ಬೆಕ್ಕಿನ ಚಲನೆಯನ್ನು ಹುಲಿ ಎಂದು ಬ್ರೇಕಿಂಗ್‌ ನ್ಯೂಸ್ ಮಾಡುವ ಪ್ರಚಂಡರು ನಾವು ಪ್ರಚಂಡರು…..

ರಸ್ತೆಯಲ್ಲಿ ಮಕ್ಕಳನ್ನು ಕೊಚ್ಚಿಕೊಂದ ನಾಯಿಗಳಿದ್ದರೂ ಸಮಸ್ಯೆ ಪರಿಹರಿಸದ ಮತಿಹೀನರು ನಾವು ಮತಿಹೀನರು……

ತಿನ್ನುವ ಆಹಾರ ಕಲಬೆರಕೆ ಮಾಡುವ ಮುಠ್ಠಾಳರು ನಾವು ಮುಠ್ಠಾಳರು…….

ಕೃಷಿಭೂಮಿಯನ್ನು 30×40 ಸೈಟ್ ಮಾಡಿ ಮಾರಿಕೊಂಡು ಹಣ ಉಡಾಯಿಸಿದ ಪಾಪಿಗಳು ನಾವು ಪಾಪಿಗಳು…….

ಸಂಸಾರದ ಸಹಜ ಗಲಾಟೆಯನ್ನು ಸುದ್ದಿಮಾಡಿ ಕಾಸು ಮಾಡುವ ದಗಾಕೋರರು ನಾವು ದಗಾಕೋರರು…….

ಆತ್ಮಹತ್ಯೆಯಿಂದ ಸತ್ತ ರೈತನ ಹೆಣದ ಮುಂದೆ ರಾಜಕೀಯ ಮಾಡುವ ವಿಕೃತರು ನಾವು ವಿಕೃತರು……

ಕಾಡನ್ನು ಕಡಿದು ಶೋಕಿಗಾಗಿ ರೆಸಾರ್ಟ ನಿರ್ಮಿಸುವ ಖದೀಮರು ನಾವು ಖದೀಮರು…….

ಹುಲಿ ಚರ್ಮದ ಮೇಲೆ ಕುಳಿತು ವೇದ ಮಂತ್ರ ಪಠಿಸುವ ಅನಾಗರಿಕರು ನಾವು ಅನಾಗರಿಕರು….

ಕೈ ತೋರಿಸಿ ಭವಿಷ್ಯ ಕೇಳುವ ಶತಮೂರ್ಖರು ನಾವು ಶತಮೂರ್ಖರು…..

ದೇವರ ವಿಗ್ರಹವನ್ನು ಮುಟ್ಟಲೂ ಮೈಲಿಗೆ ಎನ್ನುವ ಮೂಢರು ನಾವು ಮೂಢರು…….

ಆಸ್ಪತ್ರೆಗಿಂತ ಮಸೀದಿ ಮಂದಿರ ಚರ್ಚುಗಳನ್ನೇ ಭವ್ಯವಾಗಿ ನಿರ್ಮಿಸಿ ಅನಾರೋಗ್ಯವಾದಾಗ ಕೊಳಕು ಆಸ್ಪತ್ರೆಗೆ ಧಾವಿಸುವ ಆತ್ಮವಂಚಕರು ನಾವು ಆತ್ಮವಂಚಕರು…….

ಗ್ರಂಥಾಲಯಗಳನ್ನು ಪಾಳು ಮಂಟಪಗಳಾಗಿಸಿ ಬಾರುಗಳನ್ನು ಲವಲವಿಕೆಯಿಂದ ಇರುವಂತೆ ನೋಡಿಕೊಂಡಿರುವ ಬುದ್ದಿವಂತರು ನಾವು ಬುದ್ದಿವಂತರು……

ಸಿಗರೇಟು ಕ್ಯಾನ್ಸರ್‌ ಗೆ ಕಾರಣ ಎಂದು ಪಾಕೆಟ್ ಮೇಲೆ ಬರೆದುಕೊಡು ಅಂಗಡಿಗಳಲ್ಲಿ ಮಾರುವ ದನದಾಹಿಗಳು ನಾವು ದನದಾಹಿಗಳು…..

ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎನ್ನುತ್ತಾ ಸತ್ಯ ಹೇಳುವವನ್ನು ಹಿಂಸಿಸುವ ಮನೋ ವಿಕೃತರು ನಾವು ಮನೋ ವಿಕೃತರು…….

ವಾಸ್ತವ ಜಗತ್ತಿಗಿಂತ ಭ್ರಮಾ ಲೋಕವೇ ಅಪ್ಯಾಯಮಾನ ಎಂದು ಅರ್ಥಮಾಡಿಕೊಂಡ ಮೂರ್ಖರು ನಾವು ಮೂರ್ಖರು…..

ಅಸಮಾನತೆ, ಮೌಢ್ಯತೆಯನ್ನು ನಮ್ಮ ಸಂಸ್ಕೃತಿ ಎಂದು ಹೆಮ್ಮೆ ಪಡುವ ಮನೋ ವೈಕಲ್ಯದವರು ನಾವು ಮನೋ ವೈಕಲ್ಯದವರು……

ಇದು ಉದಾಹರಣೆಗಳು ಮಾತ್ರ.
ಸಹಜತೆ ಇನ್ನೂ ಭಯಂಕರವಾಗಿದೆ.

ಒಂದು ವೇಳೆ ಈ ಸಮಾಜ ಇದಕ್ಕಿಂತ ಉತ್ತಮವಾಗಿದೆ ಎಂಬ ಅಭಿಪ್ರಾಯ ನಿಮ್ಮದಾದರೆ ತುಂಬಾ ಸಂತೋಷ. ಅದನ್ನು ಗೌರವಿಸುತ್ತೇನೆ. ನಿಮ್ಮ ಅದೃಷ್ಟಕ್ಕೆ ಅಭಿನಂದನೆಗಳು. ಈ ಲೇಖನ ನಿಮಗೆ ಅನ್ವಯಿಸುವುದಿಲ್ಲ.

ನಾನು ಕಂಡ ನನ್ನ ಅನುಭವಗಳನ್ನು ಮಾತ್ರ ಇಲ್ಲಿ ಹೇಳಲಾಗಿದೆ. ಒಳ್ಳೆಯವರ ಸುದ್ದಿ ನನಗೆ ಬೇಡ. ಅವರಿಂದ ಸಮಾಜಕ್ಕೆ ಯಾವುದೇ ತೊಂದರೆ ಇಲ್ಲ. ಕೆಟ್ಟವರ ಬಗ್ಗೆ ಮಾತ್ರ ನನ್ನ ಚಿಂತೆ. ಏಕೆಂದರೆ ನಾನು ಸಹ ಕೆಟ್ಟವನು ಮತ್ತು ಕೆಟ್ಟ ಸಮಾಜದಲ್ಲಿ ಜೀವಿಸುತ್ತಿದ್ದೇನೆ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago