ನಮ್ಮ ಸಾಲವನ್ನು ಸಿಎಂ ಸಿದ್ದರಾಮಯ್ಯ ಮನ್ನಾ ಮಾಡುತ್ತಾರೆ, ನಾವು ಸಾಲ ಮರುಪಾವತಿ ಮಾಡಲ್ಲ. ನೀವು ಸಾಲದ ಕಂತು ಕೇಳಿಕೊಂಡು ಪದೇ ಪದೇ ಮನೆಗಳ ಬಳಿ ಬರಬೇಡಿ ಎಂದು ಸಾಲ ವಸೂಲಿಗೆ ಬಂದಿದ್ದ ಕ್ಯಾಲನೂರು ಸೊಸೈಟಿ ಸಿಬ್ಬಂದಿ ವಿರುದ್ಧ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ವೇಮಗಲ್ ನಡೆದ ಸ್ತ್ರೀ ಶಕ್ತಿ ಮಹಿಳಾ ಸಮಾವೇಶದಲ್ಲಿ ಭಾಷಣದಲ್ಲಿ ಹೇಳಿದ್ದರು. ನಿಮ್ಮ ಸಂಘಗಳ ಸಾಲದ ಕಂತುಗಳನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು ಎಂದ ಮಹಿಳೆಯರು.
ಸಿದ್ದರಾಮಯ್ಯ ಅವರು ಇನ್ನೂ ಕೆಲವೇ ದಿನಗಳಲ್ಲಿ ನಮ್ಮ ಸಂಘಗಳ ಸಾಲ ಮನ್ನಾ ಮಾಡುತ್ತಾರೆ, ನೀವ್ಯಾಕೆ ಸಾಲ ಮರುಪಾವತಿಗೆ ಒತ್ತಡ ಹಾಕುವಿರಿ, ಸಾಲಮನ್ನಾ ಮಾಡುವವರೆಗೆ ಸಾಲ ವಸೂಲಾತಿಗೆ ನಮ್ಮ ಮನೆ ಬಾಗಿಲಿಗೆ ಬರಬೇಡಿ ಎಂದು ಸೊಸೈಟಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…