ನಮ್ಮ ಸಾಲವನ್ನು ಸಿಎಂ ಸಿದ್ದರಾಮಯ್ಯ ಮನ್ನಾ ಮಾಡುತ್ತಾರೆ, ನಾವು ಸಾಲ ಮರುಪಾವತಿ ಮಾಡಲ್ಲ. ನೀವು ಸಾಲದ ಕಂತು ಕೇಳಿಕೊಂಡು ಪದೇ ಪದೇ ಮನೆಗಳ ಬಳಿ ಬರಬೇಡಿ ಎಂದು ಸಾಲ ವಸೂಲಿಗೆ ಬಂದಿದ್ದ ಕ್ಯಾಲನೂರು ಸೊಸೈಟಿ ಸಿಬ್ಬಂದಿ ವಿರುದ್ಧ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ವೇಮಗಲ್ ನಡೆದ ಸ್ತ್ರೀ ಶಕ್ತಿ ಮಹಿಳಾ ಸಮಾವೇಶದಲ್ಲಿ ಭಾಷಣದಲ್ಲಿ ಹೇಳಿದ್ದರು. ನಿಮ್ಮ ಸಂಘಗಳ ಸಾಲದ ಕಂತುಗಳನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು ಎಂದ ಮಹಿಳೆಯರು.
ಸಿದ್ದರಾಮಯ್ಯ ಅವರು ಇನ್ನೂ ಕೆಲವೇ ದಿನಗಳಲ್ಲಿ ನಮ್ಮ ಸಂಘಗಳ ಸಾಲ ಮನ್ನಾ ಮಾಡುತ್ತಾರೆ, ನೀವ್ಯಾಕೆ ಸಾಲ ಮರುಪಾವತಿಗೆ ಒತ್ತಡ ಹಾಕುವಿರಿ, ಸಾಲಮನ್ನಾ ಮಾಡುವವರೆಗೆ ಸಾಲ ವಸೂಲಾತಿಗೆ ನಮ್ಮ ಮನೆ ಬಾಗಿಲಿಗೆ ಬರಬೇಡಿ ಎಂದು ಸೊಸೈಟಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…