Categories: ಲೇಖನ

ನಾವು ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ….

ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……

( ಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ,
ಕಾಮದ ಬಲೆಯೊಳಗೆ ಬಂಧಿಯಾಗಿ,
ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ,
ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..)

ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು,
ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ
ಜಿಹ್ವೆ ಎಂಜಲು,
ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು…….
ಅಲ್ಲಮಪ್ರಭು,

ಸತ್ಯವೂ ಇಲ್ಲ ಅಸತ್ಯವೂ ಇಲ್ಲ,
ಸಹಜವೂ ಇಲ್ಲ ಅಸಹಜವೂ
ಇಲ್ಲ.
ನಾನು ಇಲ್ಲ ನೀನು ಇಲ್ಲ,
ಇಲ್ಲ ಇಲ್ಲ ಎಂಬುದು ತಾನಿಲ್ಲ,
ಗುಹೇಶ್ವರ ಲಿಂಗ
ತಾ ಬಯಲು….
ಅಲ್ಲಮಪ್ರಭು,

ಹಸಿವಾದೊಡೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳ ಭಾವಿಗಳುಂಟು,
ಶಯನಕ್ಕೆ ಹಾಳು ದೇಗುಲಗಳುಂಟು, ಚೆನ್ನಮಲ್ಲಿಕಾರ್ಜುನಯ್ಯ ಆತ್ಮ ಸಂಗಾತಕ್ಕೆ ನೀನೆನಗುಂಟು… –
ಅಕ್ಕ ಮಹಾದೇವಿ,

ಆಳ ಪ್ರೀತಿಯಲ್ಲಿ ಸಿಲುಕಿ ಅದರಿಂದ ವಂಚನೆಗೊಳಗಾಗಿ ವಿರಹಿಯಾದ ವ್ಯಕ್ತಿಗಳು ಹುಚ್ಚರಾಗುತ್ತಾರೆ ಅಥವಾ ವ್ಯಸನಿಗಳಾಗುತ್ತಾರೆ ಅಥವಾ ತತ್ವಜ್ಞಾನಿಗಳಾಗುತ್ತಾರೆ ಎಂಬ ಮಾತಿದೆ…..

ಇಲ್ಲಿನ ವ್ಯಕ್ತಿಯು ತತ್ವಜ್ಞಾನಿಯಾಗುವ ಹಾದಿಯಲ್ಲಿದ್ದಾನೆ ಎನಿಸುತ್ತದೆ……

ಪ್ರೀತಿಯ ಆಳದಲ್ಲಿ ಅರಳುವ ಬದುಕು ತದನಂತರ ಬದುಕಿನ ಸುನಾಮಿಗೆ ಸಿಲುಕಿ ವಿವಿಧ ರೂಪಗಳನ್ನು ಪಡೆಯುತ್ತಾ, ಪಡೆಯುತ್ತಾ ತತ್ವಜ್ಞಾನಕ್ಕೆ ಸಾಗಿ ಬಯಲಾಗುವ ಪ್ರಕ್ರಿಯೆ ಬಹುಶಃ ಕೆಲವರಿಗೆ ಮಾತ್ರ ಸಿಗುವಂತದ್ದು…..

ಸಹಜ ಸ್ಥಿತಿಯಲ್ಲಿ ಇದು ಸಾಧ್ಯವಿಲ್ಲ. ಹಾಗೆಯೇ ಇದನ್ನು ಒಂದು ಯೋಜನೆಯಂತೆ, ಕಲಿಕೆಯಂತೆ, ಸಾಧನೆಯಂತೆ ಪಡೆಯಲು ಸಾಧ್ಯವಿಲ್ಲ. ಇದು ಘಟಿಸಬೇಕು ಮತ್ತು ಘಟಿಸುತ್ತದೆ. ಘಟಿಸಿದಾಗ ಮಾತ್ರ ಹೊಮ್ಮುವ ಬಾ
ಭಾವವಿದು…….

ಅಲ್ಲಮ ನಾನೆಂಬುದು ಅರಿವಿನ ಎಂಜಲು ಎಂಬಂತ ಅತ್ಯಮೋಘ,
ಸೃಷ್ಟಿಯ ವಾಸ್ತವ ಸತ್ಯವನ್ನು ಹೇಳುತ್ತಾರೆ. ಹಾಗೆಯೇ ಬದುಕಿನ ನಶ್ವರತೆಯ ಬಗ್ಗೆ ಅಕ್ಕಮಹಾದೇವಿಯು ಬರೆಯುತ್ತಾರೆ,
ಇವೆರಡರ ಒಳ ಅರ್ಥವೇ
ತತ್ವಜ್ಞಾನದ ಸಾರಗಳು……

ಅಲ್ಲಮ, ಅಕ್ಕಮಹಾದೇವಿಯಂತ ಅದ್ಭುತ ಚಿಂತನೆಗಳ ವಚನಕಾರರನ್ನು ಒಬ್ಬ ನೊಂದ ಜೀವಿಯು ಉದಾಹರಣೆಗಳ ಸಮೇತ ನೆನಪಿಸಿಕೊಳ್ಳಲು ಕಾರಣ, ಈ ಬದುಕಿನ ವಾಸ್ತವತೆಗೆ ಆತ/ಆಕೆ ತೆರೆದುಕೊಳ್ಳುವ ಅಥವಾ ಬಯಲಾಗುವ ಅಥವಾ ಬೆತ್ತಲಾಗುವ ಅಥವಾ ಮುಕ್ತವಾಗುವ ಪ್ರಕ್ರಿಯೆಯ ಭಾಗ…..

ನಿನ್ನ ನೋಟ ನಿನ್ನದೇ ಕಣ್ಣಿನ ಎಂಜಲು,
ನಿನ್ನ ಸ್ಪರ್ಶ ಚರ್ಮದ ಎಂಜಲು, ನಿನ್ನ ರುಚಿ ನಾಲಿಗೆಯ ಎಂಜಲು,
ನಿನ್ನ ವಾಸನೆ ಮೂಗಿನ ಎಂಜಲು,
ನೀನೆಂಬುದೇ ನಿನ್ನ ಅರಿವಿನ ಎಂಜಲು,
ಎಂಬಂತ ನಿನ್ನನ್ನೇ ನೀನು ಅರಿತುಕೊಳ್ಳಲು,
ನಿನ್ನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿಕೊಳ್ಳಲು,
ನಿನ್ನ ಇರುವನ್ನೇ ಪ್ರಶ್ನಿಸಲು, ಅಲ್ಲಮ ಉಪಯೋಗಿಸುವ ಅರ್ಥಗರ್ಭಿತ ಪರಿಕಲ್ಪನೆ ಅಷ್ಟು ಸುಲಭವಾಗಿ ಸಾಮಾನ್ಯ ಜನರ ಜ್ಞಾನಕ್ಕೆ ನಿಲುಕುವುದಿಲ್ಲ….

ಹಾಗೆಯೇ ಎಲ್ಲೋ ಕೆರೆ ಬಾವಿಯ ನೀರು ಕುಡಿಯುತ್ತಾ, ಯಾರೋ ಭಿಕ್ಷೆಯಾಗಿ ನೀಡಿದ ಆಹಾರ ಸೇವಿಸುತ್ತಾ,
ಇನ್ನೆಲ್ಲೋ ಸಿಕ್ಕಸಿಕ್ಕ ಜಾಗಗಳಲ್ಲಿ ಮಲಗುತ್ತಾ,
ಬದುಕನ್ನು ಅತ್ಯಂತ ಸುಂದರವಾಗಿ, ಸರಳವಾಗಿ, ಸಹಜವಾಗಿ ಕಳೆಯುವ ಆ ಸರಳತೆ, ಆ ಸ್ಥಿತಪ್ರಜ್ಞತೆ, ಅಕ್ಕಮಹಾದೇವಿಯ ವಚನದ ಈ ಸಾಲುಗಳು ನಮ್ಮಂತ ಸಾಮಾನ್ಯ ಜನರ ಅರಿವಿಗೆ ನಿಲುಕಿದ್ದೇ ಆದರೆ ಯಾವ ಕಷ್ಟಗಳು ಕಷ್ಟಗಳಲ್ಲ,
ಯಾವ ವಿರಹಗಳು ವೇದನೆಯಲ್ಲ,
ಯಾವ ನೋವುಗಳು ನೋವುಗಳೇ ಅಲ್ಲ….

ಅದರ ಅರ್ಥ ನಮಗೆ ಕಷ್ಟಗಳು ನೋವುಗಳು, ಸಾವುಗಳು ಇರುವುದಿಲ್ಲ ಎಂಬುದಲ್ಲ. ಅವು ಇದ್ದರೂ ಅದನ್ನು ಸಹಿಸುವ, ಸ್ವೀಕರಿಸುವ, ಅದಕ್ಕೆ ಪ್ರತಿಕ್ರಿಯಿಸುವ ನಮ್ಮ ಮನಸ್ಥಿತಿ ನಮ್ಮನ್ನು ಸದಾ ನೆಮ್ಮದಿಯಾಗಿರುವಂತೆ ಸಂತೋಷದಿಂದಿರುವಂತೆ, ಅವು ನಮ್ಮನ್ನು ಅತಿಯಾಗಿ ಕಾಡದಂತೆ, ಎಲ್ಲವನ್ನು ಕಳೆದುಕೊಂಡರು ನಮ್ಮನ್ನು ನಾವು ಪಡೆಯುವಂತೆ, ತತ್ವಜ್ಞಾನಿಯ ಮನಸ್ಥಿತಿಯಲ್ಲಿ ನಾವು ಬದುಕಬಹುದು ಎಂಬುದನ್ನು ಅರ್ಥ ಮಾಡಿಸುತ್ತದೆ……..

ಅದಕ್ಕಾಗಿಯೇ ನೊಂದ ವಿರಹಿಯೊಬ್ಬ ಈ ರೀತಿಯ ಸಾಲುಗಳನ್ನು ಆಯ್ಕೆ ಮಾಡಿಕೊಂಡು ತನ್ನೆಲ್ಲಾ ನೋವುಗಳನ್ನು ನಲಿವಾಗಿ ಪರಿವರ್ತಿಸಿಕೊಳ್ಳುವ ಪ್ರಕ್ರಿಯೆ ನಮ್ಮ ಕಣ್ಣ ಮುಂದೆಯೇ ಇದೆ. ಇದನ್ನು ಇಲ್ಲಿ ಪ್ರಸ್ತಾಪಿಸಲು ಕಾರಣ ಅನೇಕ ವಿರಹಿಗಳು, ಕಷ್ಟಕ್ಕೆ ಸಿಲುಕಿದವರು, ಅಸಹಾಯಕರು, ವ್ಯಸನಿಗಳಾಗಲು, ಹುಚ್ಚರಾಗಲು, ಆತ್ಮಹತ್ಯೆಗೆ ಶರಣಾಗಲು ಕಾರಣವೇ ಇಲ್ಲ. ಏಕೆಂದರೆ ಬದುಕು ಅಷ್ಟೊಂದು ಹೀನವಲ್ಲ, ನಾವು ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ. ಕಷ್ಟಗಳು ಬದುಕಿನ ಭಾಗಗಳು. ನಾವು ಸಹಜವಾಗಿ ಅದನ್ನು ಮೀರಲು ಅದಕ್ಕಿಂತ ಅತ್ಯುತ್ತಮ ಅವಕಾಶಗಳು, ಕಾರಣಗಳು ನಮ್ಮ ನಡುವೆ ಇದೆ. ಅದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ. ನಮ್ಮಲ್ಲಿನ ಇಷ್ಟೊಂದು ಅದ್ಭುತ ಚಿಂತನೆಗಳು ಇರುವಾಗ ಸಾವಿಗೆ ನೋವಿಗೆ ವಿರಹಕ್ಕೆ ಅಂಜಬೇಕಿಲ್ಲ. ದಯವಿಟ್ಟು ಅದನ್ನು ಹುಡುಕುವ ಪ್ರಯತ್ನ ಮಾಡಿ…………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

1 hour ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

7 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

8 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago