ಉತ್ತರ ಪ್ರದೇಶದ ಲಕ್ನೋದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲನ್ನು ಹತ್ತಿ ಬಾಲಕ ಆಟವಾಡುತ್ತಿದ್ದ, ಸ್ವಲ್ಪ ಹೊತ್ತಲ್ಲೇ ರೈಲು ತನ್ನ ಪ್ರಯಾಣವನ್ನು ಪ್ರಾರಂಭಿಸಿತು. ಇದರಿಂದ ಕೆಳಗೆ ಇಳಿಯಲು ಬಾಲಕನಿಂದ ಸಾಧ್ಯವಾಗಲಿಲ್ಲ.
ಉನ್ನತ ಮೂಲಗಳ ಪ್ರಕಾರ, ಲಕ್ನೋದ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಸುಮರು 8-10 ವರ್ಷದ ಬಾಲಕ ಆಟವಾಡುತ್ತಿದ್ದಾಗ ಗೂಡ್ಸ್ ರೈಲಿನ ಚಕ್ರದ ವಿಭಾಗಕ್ಕೆ ಸಿಲುಕಿದನು. ನಂತರ ಗೂಡ್ಸ್ ರೈಲು ಪಯಣ ಬೆಳೆಸಿತು, ಅದು ಹುಡುಗನನ್ನು ಕೆಳಗಿಳಿಯದಂತೆ ತಡೆಯಿತು. ಹೀಗಾಗಿ ಗೂಡ್ಸ್ ರೈಲಿನ ಚಕ್ರಗಳಿಗೆ ಸಿಲುಕಿ ಲಕ್ನೋದಿಂದ 100 ಕಿ.ಮೀ ದೂರದಲ್ಲಿರುವ ಹರ್ದೋಯಿ ತಲುಪಿದ್ದಾನೆ. ಬಾಲಕ ಚಕ್ರದಲ್ಲಿ ಸಿಲುಕಿರುವ ಬಗ್ಗೆ ರೈಲ್ವೆ ಸಿಬ್ಬಂದಿಗೆ ಮಾಹಿತಿ ಬಂದ ನಂತರ ವಾಹನವನ್ನು ಹಾರ್ಡೋಯ್ನಲ್ಲಿ ನಿಲ್ಲಿಸಲಾಯಿತು.
ನಂತರ ಘಟನೆಯ ಬಗ್ಗೆ ಹರ್ದ್ವಾರ್ ರೈಲ್ವೆ ರಕ್ಷಣಾ ಪಡೆಗೆ ಮಾಹಿತಿ ನೀಡಲಾಯಿತು. ಹರ್ದೋಯ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ನಿಂತ ಬಳಿಕ ರೈಲ್ವೇ ರಕ್ಷಣಾ ಪಡೆ ಬಾಲಕನನ್ನು ರಕ್ಷಿಸಿದೆ. ನಂತರ ಬಾಲಕನನ್ನು ಹರ್ಡೋಯಿ ಹೊರಠಾಣೆಗೆ ಕರೆತರಲಾಯಿತು. ವಿಚಾರಣೆ ವೇಳೆ ತಾನು ಲಕ್ನೋದ ಬಾಲಾಜಿ ದೇವಸ್ಥಾನದ ನಿವಾಸಿ ಅಜಯ್ ಪುರನ್ ಎಂದು ಬಾಲಕ ಹೇಳಿದ್ದಾನೆ. ಬಾಲಕನನ್ನು ಚಕ್ರದಿಂದ ಹೊರತೆಗೆಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಫುಲ್ ವೈರಲ್ ಆಗುತ್ತಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…