ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಸಮೀಪದ ಮಾಚಗೊಂಡನಹಳ್ಳಿ ಬಳಿ ರಾತ್ರಿ 10ಗಂಟೆ ಸಮಯದಲ್ಲಿ ನಡೆದಿದೆ.
ಬಿಹಾರ ಮೂಲದ ಧರ್ಮೇಂದ್ರ ಕುಮಾರ್ ಗುಪ್ತಾ ಮೃತ ದುರ್ದೈವಿ. ಮಧ್ಯಪ್ರದೇಶ ಮೂಲದ ಆದಿತ್ಯಾ ಸಿಂಗ್ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಇಬ್ಬರು ಬಿರ್ಲಾ ಸೂಪರ್ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ನಿಂದ ವಾಪಸ್ ಬರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದ 112 ಪೊಲೀಸ್ ಸಿಬ್ಬಂದಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾತ್ರಿ ವೇಳೆ ಭಾರೀ ಗಾತ್ರದ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತವೆ. ಈಗ ಮಳೆಗಾಲ ಇರುವುದರಿಂದ ಭಾರೀ ಗಾತ್ರದ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…