ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹಿಟ್ಟಿನ ಬೈಲ ಬಳಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ.
ಮೃತಪಟ್ಟವರನ್ನು ನೀಲವ್ವ ಯಲಗುರ್ದಪ್ಪ ಹರದೊಳ್ಳಿ (ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ), ಗಿರಿಜವ್ವ ಅಯ್ಯಪ್ಪ ಬೂದನ್ನವರ (ಬಾದಾಮಿ ತಾಲೂಕಿನ ಜಾಲಿಹಾಳ) ಹಾಗೂ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ರಮೇಶ್ ಚಂದಪ್ಪ ಕಿತ್ತಳಿ, ಅವರ ಮಗ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳಪ್ಪ ಹಳಬರ, ಮಲ್ಲಿಕಾರ್ಜುನ ಅಂದಲ, ದೇವಕಿ ಬೆಳ್ಳಿ, ಸಮೀರಾ ಬೇಗಂ ಹಾಗೂ ಶರೀಫಾ ಬೇಗಂ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟ ಜಿಲ್ಲೆಯ ಅಮ್ಮಿನಗಡದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಿಟ್ಟಿನ ಬೈಲ ಬಳಿ ಯಾವುದೇ ರಸ್ತೆ ಸುರಕ್ಷಾ ಕ್ರಮವಿಲ್ಲದೆ, ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದು ಮತ್ತು ಸುರಕ್ಷತೆ ಕ್ರಮವಿಲ್ಲದೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ಲಾರಿ ಮತ್ತು ಬಸ್ ಚಾಲಕ ಇಬ್ಬರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…