ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹಿಟ್ಟಿನ ಬೈಲ ಬಳಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ.
ಮೃತಪಟ್ಟವರನ್ನು ನೀಲವ್ವ ಯಲಗುರ್ದಪ್ಪ ಹರದೊಳ್ಳಿ (ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ), ಗಿರಿಜವ್ವ ಅಯ್ಯಪ್ಪ ಬೂದನ್ನವರ (ಬಾದಾಮಿ ತಾಲೂಕಿನ ಜಾಲಿಹಾಳ) ಹಾಗೂ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ರಮೇಶ್ ಚಂದಪ್ಪ ಕಿತ್ತಳಿ, ಅವರ ಮಗ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳಪ್ಪ ಹಳಬರ, ಮಲ್ಲಿಕಾರ್ಜುನ ಅಂದಲ, ದೇವಕಿ ಬೆಳ್ಳಿ, ಸಮೀರಾ ಬೇಗಂ ಹಾಗೂ ಶರೀಫಾ ಬೇಗಂ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟ ಜಿಲ್ಲೆಯ ಅಮ್ಮಿನಗಡದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಿಟ್ಟಿನ ಬೈಲ ಬಳಿ ಯಾವುದೇ ರಸ್ತೆ ಸುರಕ್ಷಾ ಕ್ರಮವಿಲ್ಲದೆ, ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದು ಮತ್ತು ಸುರಕ್ಷತೆ ಕ್ರಮವಿಲ್ಲದೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ಲಾರಿ ಮತ್ತು ಬಸ್ ಚಾಲಕ ಇಬ್ಬರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…