ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ ಮಿತ್ರ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿರುವ ಸೇವಾ ಕಾರ್ಯಗಳನ್ನು ಪರಿಶೀಲನೆ ನಡೆಸಲಾಯಿತು.

ಡಾ. ನಾಗೇಶ್ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ನಿಕ್ಷಯ ಮಿತ್ರ ಕಾರ್ಯಕ್ರಮದ ಮೂಲಕ ಸಾರ್ವಜನಿಕ–ದಾನಿಗಳ ಸಹಕಾರದಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಹಾಗೂ ಮಾನಸಿಕ ಬೆಂಬಲ ದೊರಕುತ್ತಿದ್ದು, ರೋಗ ಮುಕ್ತ ಭಾರತದ ಗುರಿಗೆ ಇದು ಮಹತ್ವದ ಹೆಜ್ಜೆಯಾಗಿದೆ.

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ ಕಾರ್ಯಕ್ರಮದ ಉದ್ದೇಶ ಬಡ ಕ್ಷಯ ರೋಗಿಗಳಿಗೆ ದಾನಿಗಳ ಮೂಲಕ ಪೌಷ್ಟಿಕ ಆಹಾರ (ಫುಡ್ ಕಿಟ್) ವಿತರಣೆ ಮಾಡಿ ಅವರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಹಾಯ ಮಾಡುವುದಾಗಿದೆ.

ಈ ಸಂದರ್ಭದಲ್ಲಿ ಸುಮಾರು ಐದು ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬಡ ಕ್ಷಯ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನಿರಂತರವಾಗಿ ಪೌಷ್ಟಿಕ ಆಹಾರ ಸಹಾಯ ನೀಡುತ್ತಿರುವ ಶ್ರೀನಿವಾಸ ಮೂರ್ತಿ ಎಲ್ ಹಿರಿಯ ಉಪಾಧ್ಯಕ್ಷರು ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ, ಅವರನ್ನು ಸನ್ಮಾನಿಸಲಾಯಿತು.

ಅವರ ಸೇವೆಯಿಂದ ಪ್ರೇರಿತರಾಗಿ ಇನ್ನೂ ಅನೇಕ ದಾನಿಗಳು ಮುಂದೆ ಬಂದು ಕ್ಷಯ ರೋಗಿಗಳಿಗೆ ಸಹಾಯ ಮಾಡುವ ಮನೋಭಾವ ತೋರಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಾ.ಧರ್ಣಾ ರಾವ್ ನ್ಯಾಷನಲ್ ಲೆವೆಲ್ ಟೆಕ್ನಿಕಲ್ ಅಸಿಸ್ಟನ್ಸ್ (TL-TA), ಡಾ. ಅಖಿಲೇಶ್ ಶ್ರೀವಾತ್ಸವ್  ನ್ಯಾಷನಲ್ ಕನ್ಸಲ್ಟಂಟ್, ನಿಕ್ಷಯ ಮಿತ್ರ ಇನಿಶಿಯೇಟಿವ್ ನಮ್ಯ ಎ ಎಸ್ ಸ್ಟೇಟ್ ಪ್ರೋಗ್ರಾಂ ಆಫೀಸರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಡಾ. ರಮೇಶ್ ಪಿಎಸ್, ಡಾ. ಮಂಜುನಾಥ್, ಡಾ. ಪರಮೇಶ್ವರ್, ಡಾ. ಗಾಯತ್ರಿ, ಹಿರಿಯ ನರ್ಸಿಂಗ್ ಆಫೀಸರ್ ಶೈಲಜಾ, ಹಿರಿಯ ಚಿಕಿತ್ಸೆ ಮೇಲ್ವಿಚಾರಕ ಆನಂದ್, DRTB ಸೂಪರ್ವೈಸರ್ ಸಿದ್ದರಾಜು, ಯುವರಾಜ್, ಕಿರಣ್, ಹಿರಿಯ ಮೇಲ್ವಿಚಾರಕ ಪ್ರಭಾಕರ್, ಮಂಜುನಾಥ್, ಕೆ ಸಿ ರುದ್ರೇಶ್, ಸುರೇಶ್ ಹಾಗೂ ಆಸ್ಪತ್ರೆಯ  ಸಿಬ್ಬಂದಿ ವರ್ಗದವರು ಹಾಗೂ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

1 hour ago

ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರ ಮೂಲದ ಎನ್ನಲಾದ ಐವರ ಸಾವು

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ…

3 hours ago

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

18 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

21 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

1 day ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

1 day ago