ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ ಮಿತ್ರ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿರುವ ಸೇವಾ ಕಾರ್ಯಗಳನ್ನು ಪರಿಶೀಲನೆ ನಡೆಸಲಾಯಿತು.

ಡಾ. ನಾಗೇಶ್ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ನಿಕ್ಷಯ ಮಿತ್ರ ಕಾರ್ಯಕ್ರಮದ ಮೂಲಕ ಸಾರ್ವಜನಿಕ–ದಾನಿಗಳ ಸಹಕಾರದಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಹಾಗೂ ಮಾನಸಿಕ ಬೆಂಬಲ ದೊರಕುತ್ತಿದ್ದು, ರೋಗ ಮುಕ್ತ ಭಾರತದ ಗುರಿಗೆ ಇದು ಮಹತ್ವದ ಹೆಜ್ಜೆಯಾಗಿದೆ.

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ ಕಾರ್ಯಕ್ರಮದ ಉದ್ದೇಶ ಬಡ ಕ್ಷಯ ರೋಗಿಗಳಿಗೆ ದಾನಿಗಳ ಮೂಲಕ ಪೌಷ್ಟಿಕ ಆಹಾರ (ಫುಡ್ ಕಿಟ್) ವಿತರಣೆ ಮಾಡಿ ಅವರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಹಾಯ ಮಾಡುವುದಾಗಿದೆ.

ಈ ಸಂದರ್ಭದಲ್ಲಿ ಸುಮಾರು ಐದು ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬಡ ಕ್ಷಯ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನಿರಂತರವಾಗಿ ಪೌಷ್ಟಿಕ ಆಹಾರ ಸಹಾಯ ನೀಡುತ್ತಿರುವ ಶ್ರೀನಿವಾಸ ಮೂರ್ತಿ ಎಲ್ ಹಿರಿಯ ಉಪಾಧ್ಯಕ್ಷರು ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ, ಅವರನ್ನು ಸನ್ಮಾನಿಸಲಾಯಿತು.

ಅವರ ಸೇವೆಯಿಂದ ಪ್ರೇರಿತರಾಗಿ ಇನ್ನೂ ಅನೇಕ ದಾನಿಗಳು ಮುಂದೆ ಬಂದು ಕ್ಷಯ ರೋಗಿಗಳಿಗೆ ಸಹಾಯ ಮಾಡುವ ಮನೋಭಾವ ತೋರಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಾ.ಧರ್ಣಾ ರಾವ್ ನ್ಯಾಷನಲ್ ಲೆವೆಲ್ ಟೆಕ್ನಿಕಲ್ ಅಸಿಸ್ಟನ್ಸ್ (TL-TA), ಡಾ. ಅಖಿಲೇಶ್ ಶ್ರೀವಾತ್ಸವ್  ನ್ಯಾಷನಲ್ ಕನ್ಸಲ್ಟಂಟ್, ನಿಕ್ಷಯ ಮಿತ್ರ ಇನಿಶಿಯೇಟಿವ್ ನಮ್ಯ ಎ ಎಸ್ ಸ್ಟೇಟ್ ಪ್ರೋಗ್ರಾಂ ಆಫೀಸರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಡಾ. ರಮೇಶ್ ಪಿಎಸ್, ಡಾ. ಮಂಜುನಾಥ್, ಡಾ. ಪರಮೇಶ್ವರ್, ಡಾ. ಗಾಯತ್ರಿ, ಹಿರಿಯ ನರ್ಸಿಂಗ್ ಆಫೀಸರ್ ಶೈಲಜಾ, ಹಿರಿಯ ಚಿಕಿತ್ಸೆ ಮೇಲ್ವಿಚಾರಕ ಆನಂದ್, DRTB ಸೂಪರ್ವೈಸರ್ ಸಿದ್ದರಾಜು, ಯುವರಾಜ್, ಕಿರಣ್, ಹಿರಿಯ ಮೇಲ್ವಿಚಾರಕ ಪ್ರಭಾಕರ್, ಮಂಜುನಾಥ್, ಕೆ ಸಿ ರುದ್ರೇಶ್, ಸುರೇಶ್ ಹಾಗೂ ಆಸ್ಪತ್ರೆಯ  ಸಿಬ್ಬಂದಿ ವರ್ಗದವರು ಹಾಗೂ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

4 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

16 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

16 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

17 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

19 hours ago