ನಿಗದಿತ ಸಮಯಕ್ಕೆ ಬಾರದ ಸಾರಿಗೆ ಬಸ್ ಗಳು: ಪ್ರಯಾಣಿಕರ ಪರದಾಟ: ಫೂಟ್ ಬೋರ್ಡ್ ನಲ್ಲಿ ನೇತಾಡುತ್ತಾ ಹೊರಟ ವಿದ್ಯಾರ್ಥಿಗಳು

ಬೇಡಿಕೆಗೆ ತಕ್ಕ ಸೂಕ್ತ ಬಸ್ ಗಳ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೆ ಕಾದರೂ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ಗಳು. ಆಗೊಮ್ಮೆ ಈಗೊಮ್ಮೆ ಬಸ್ ಬಂದರೂ ಹತ್ತಲು ಜಾಗ ಇರೋದಿಲ್ಲ. ಹೆಜ್ಜೆ ಇಡಲು ಜಾಗವಿರದೆ ಬಸ್ ಫುಲ್ ರಷ್ ಆಗಿರುತ್ತದೆ. ಪ್ರತಿ ಬಸ್ ಸ್ಟಾಪ್ ನಲ್ಲೂ ನೂರಾರು ಮಂದಿ ಪ್ರಯಾಣಿಕರು ಕಾದು ನಿಂತೇ ಇರುತ್ತಾರೆ. ಕೆಲವೊಂದು ಬಸ್ ಗಳ ಕಂಡಿಷನ್ ಸರಿ ಇಲ್ಲದೇ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿನ ಸಾರಿಗೆ ವ್ಯವಸ್ಥೆ ಇರುತ್ತದೆ….

ಇಂದು(ಸೋಮವಾರ) ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ತೆರಳಲು‌ ವೃದ್ಧರು, ರೋಗಿಗಳು, ಮಹಿಳೆಯರು, ಮಕ್ಕಳು ಸೇರಿತೆ ಇತರೆ ಪ್ರಯಾಣಿಕರು ಬಸ್ ಗಳಿಗಾಗಿ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ(ಮಲ್ಲೋಹಳ್ಳಿ ಕಾಲೋನಿ) ಬಸ್ ನಿಲ್ದಾಣದಲ್ಲಿ‌ ಕಾದು ನಿಂತಿದ್ದರು.

ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ಬಸ್ಸಿನಲ್ಲಿ ಫುಲ್ ರಷ್ ಇತ್ತು. ಕೆಲವರು ಸಮಯವಿಲ್ಲವೆಂದು ರಷ್ ಇದ್ದ ಬಸ್ ಹತ್ತಿ ಫುಟ್ ಬೋರ್ಡ್ ನಲ್ಲಿ‌ ನೇತಾಡುತ್ತಾ ಹೊರಟರೆ, ಇನ್ನು ಕೆಲವರು ಇನ್ನೊಂದು ಬಸ್ಸಿಗಾಗಿ ಕಾದು ಕುಳಿತ್ತಿದ್ದರು. ಹೀಗೆ ಪ್ರತಿನಿತ್ಯ ಬಸ್ಸಿಗಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಹಾಗೂ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ರೋಡಿಗಿಳಿಸಬೇಕು ಎಂದು ಪ್ರಯಾಣಿಕರು ಕೋರಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

2 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

3 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

6 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

13 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

16 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago