ಬೇಡಿಕೆಗೆ ತಕ್ಕ ಸೂಕ್ತ ಬಸ್ ಗಳ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೆ ಕಾದರೂ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ಗಳು. ಆಗೊಮ್ಮೆ ಈಗೊಮ್ಮೆ ಬಸ್ ಬಂದರೂ ಹತ್ತಲು ಜಾಗ ಇರೋದಿಲ್ಲ. ಹೆಜ್ಜೆ ಇಡಲು ಜಾಗವಿರದೆ ಬಸ್ ಫುಲ್ ರಷ್ ಆಗಿರುತ್ತದೆ. ಪ್ರತಿ ಬಸ್ ಸ್ಟಾಪ್ ನಲ್ಲೂ ನೂರಾರು ಮಂದಿ ಪ್ರಯಾಣಿಕರು ಕಾದು ನಿಂತೇ ಇರುತ್ತಾರೆ. ಕೆಲವೊಂದು ಬಸ್ ಗಳ ಕಂಡಿಷನ್ ಸರಿ ಇಲ್ಲದೇ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿನ ಸಾರಿಗೆ ವ್ಯವಸ್ಥೆ ಇರುತ್ತದೆ….
ಇಂದು(ಸೋಮವಾರ) ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ತೆರಳಲು ವೃದ್ಧರು, ರೋಗಿಗಳು, ಮಹಿಳೆಯರು, ಮಕ್ಕಳು ಸೇರಿತೆ ಇತರೆ ಪ್ರಯಾಣಿಕರು ಬಸ್ ಗಳಿಗಾಗಿ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ(ಮಲ್ಲೋಹಳ್ಳಿ ಕಾಲೋನಿ) ಬಸ್ ನಿಲ್ದಾಣದಲ್ಲಿ ಕಾದು ನಿಂತಿದ್ದರು.
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ಬಸ್ಸಿನಲ್ಲಿ ಫುಲ್ ರಷ್ ಇತ್ತು. ಕೆಲವರು ಸಮಯವಿಲ್ಲವೆಂದು ರಷ್ ಇದ್ದ ಬಸ್ ಹತ್ತಿ ಫುಟ್ ಬೋರ್ಡ್ ನಲ್ಲಿ ನೇತಾಡುತ್ತಾ ಹೊರಟರೆ, ಇನ್ನು ಕೆಲವರು ಇನ್ನೊಂದು ಬಸ್ಸಿಗಾಗಿ ಕಾದು ಕುಳಿತ್ತಿದ್ದರು. ಹೀಗೆ ಪ್ರತಿನಿತ್ಯ ಬಸ್ಸಿಗಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಹಾಗೂ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ರೋಡಿಗಿಳಿಸಬೇಕು ಎಂದು ಪ್ರಯಾಣಿಕರು ಕೋರಿದ್ದಾರೆ.
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…