ನಿಗದಿತ ಸಮಯಕ್ಕೆ ಬಾರದ ಸಾರಿಗೆ ಬಸ್ ಗಳು: ಪ್ರಯಾಣಿಕರ ಪರದಾಟ: ಫೂಟ್ ಬೋರ್ಡ್ ನಲ್ಲಿ ನೇತಾಡುತ್ತಾ ಹೊರಟ ವಿದ್ಯಾರ್ಥಿಗಳು

ಬೇಡಿಕೆಗೆ ತಕ್ಕ ಸೂಕ್ತ ಬಸ್ ಗಳ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೆ ಕಾದರೂ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ಗಳು. ಆಗೊಮ್ಮೆ ಈಗೊಮ್ಮೆ ಬಸ್ ಬಂದರೂ ಹತ್ತಲು ಜಾಗ ಇರೋದಿಲ್ಲ. ಹೆಜ್ಜೆ ಇಡಲು ಜಾಗವಿರದೆ ಬಸ್ ಫುಲ್ ರಷ್ ಆಗಿರುತ್ತದೆ. ಪ್ರತಿ ಬಸ್ ಸ್ಟಾಪ್ ನಲ್ಲೂ ನೂರಾರು ಮಂದಿ ಪ್ರಯಾಣಿಕರು ಕಾದು ನಿಂತೇ ಇರುತ್ತಾರೆ. ಕೆಲವೊಂದು ಬಸ್ ಗಳ ಕಂಡಿಷನ್ ಸರಿ ಇಲ್ಲದೇ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿನ ಸಾರಿಗೆ ವ್ಯವಸ್ಥೆ ಇರುತ್ತದೆ….

ಇಂದು(ಸೋಮವಾರ) ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ತೆರಳಲು‌ ವೃದ್ಧರು, ರೋಗಿಗಳು, ಮಹಿಳೆಯರು, ಮಕ್ಕಳು ಸೇರಿತೆ ಇತರೆ ಪ್ರಯಾಣಿಕರು ಬಸ್ ಗಳಿಗಾಗಿ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ(ಮಲ್ಲೋಹಳ್ಳಿ ಕಾಲೋನಿ) ಬಸ್ ನಿಲ್ದಾಣದಲ್ಲಿ‌ ಕಾದು ನಿಂತಿದ್ದರು.

ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ಬಸ್ಸಿನಲ್ಲಿ ಫುಲ್ ರಷ್ ಇತ್ತು. ಕೆಲವರು ಸಮಯವಿಲ್ಲವೆಂದು ರಷ್ ಇದ್ದ ಬಸ್ ಹತ್ತಿ ಫುಟ್ ಬೋರ್ಡ್ ನಲ್ಲಿ‌ ನೇತಾಡುತ್ತಾ ಹೊರಟರೆ, ಇನ್ನು ಕೆಲವರು ಇನ್ನೊಂದು ಬಸ್ಸಿಗಾಗಿ ಕಾದು ಕುಳಿತ್ತಿದ್ದರು. ಹೀಗೆ ಪ್ರತಿನಿತ್ಯ ಬಸ್ಸಿಗಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಹಾಗೂ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ರೋಡಿಗಿಳಿಸಬೇಕು ಎಂದು ಪ್ರಯಾಣಿಕರು ಕೋರಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago