ಬೇಡಿಕೆಗೆ ತಕ್ಕ ಸೂಕ್ತ ಬಸ್ ಗಳ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೆ ಕಾದರೂ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ಗಳು. ಆಗೊಮ್ಮೆ ಈಗೊಮ್ಮೆ ಬಸ್ ಬಂದರೂ ಹತ್ತಲು ಜಾಗ ಇರೋದಿಲ್ಲ. ಹೆಜ್ಜೆ ಇಡಲು ಜಾಗವಿರದೆ ಬಸ್ ಫುಲ್ ರಷ್ ಆಗಿರುತ್ತದೆ. ಪ್ರತಿ ಬಸ್ ಸ್ಟಾಪ್ ನಲ್ಲೂ ನೂರಾರು ಮಂದಿ ಪ್ರಯಾಣಿಕರು ಕಾದು ನಿಂತೇ ಇರುತ್ತಾರೆ. ಕೆಲವೊಂದು ಬಸ್ ಗಳ ಕಂಡಿಷನ್ ಸರಿ ಇಲ್ಲದೇ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿನ ಸಾರಿಗೆ ವ್ಯವಸ್ಥೆ ಇರುತ್ತದೆ….
ಇಂದು(ಸೋಮವಾರ) ಬೆಳಗ್ಗೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ತೆರಳಲು ವೃದ್ಧರು, ರೋಗಿಗಳು, ಮಹಿಳೆಯರು, ಮಕ್ಕಳು ಸೇರಿತೆ ಇತರೆ ಪ್ರಯಾಣಿಕರು ಬಸ್ ಗಳಿಗಾಗಿ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ(ಮಲ್ಲೋಹಳ್ಳಿ ಕಾಲೋನಿ) ಬಸ್ ನಿಲ್ದಾಣದಲ್ಲಿ ಕಾದು ನಿಂತಿದ್ದರು.
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ಬಸ್ಸಿನಲ್ಲಿ ಫುಲ್ ರಷ್ ಇತ್ತು. ಕೆಲವರು ಸಮಯವಿಲ್ಲವೆಂದು ರಷ್ ಇದ್ದ ಬಸ್ ಹತ್ತಿ ಫುಟ್ ಬೋರ್ಡ್ ನಲ್ಲಿ ನೇತಾಡುತ್ತಾ ಹೊರಟರೆ, ಇನ್ನು ಕೆಲವರು ಇನ್ನೊಂದು ಬಸ್ಸಿಗಾಗಿ ಕಾದು ಕುಳಿತ್ತಿದ್ದರು. ಹೀಗೆ ಪ್ರತಿನಿತ್ಯ ಬಸ್ಸಿಗಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಹಾಗೂ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ರೋಡಿಗಿಳಿಸಬೇಕು ಎಂದು ಪ್ರಯಾಣಿಕರು ಕೋರಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…