Categories: ಕೋಲಾರ

ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರ ಒತ್ತಾಯ

ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು,

ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ ಅಂಗನವಾಡಿ ನೌಕರರಿಗೆ ಪ್ರತಿ ತಿಂಗಳು ಗೌರವ ಧನ, ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಮುಂಬಡ್ತಿ, ವರ್ಗಾವಣೆಗಳಲ್ಲಿ ರಾಜಕೀಯ ಮಾಡದೇ ನ್ಯಾಯಯುತವಾಗಿ ಆದೇಶ ನೀಡಬೇಕು ಗ್ರಾಚೂಟಿ ಜಾರಿಯಾಗಬೇಕು. ನಿವೃತ್ತಿಯಾದವರಿಗೆ ತಕ್ಷಣ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಸುಮಾರು ವರ್ಷಗಳಿಂದ ಬಾಕಿ ಉಳಿದ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ, ಪ್ರಧಾನ ಕಾರ್ಯದರ್ಶಿ ಎನ್ ಕಲ್ಪನಾ, ಉಪಾಧ್ಯಕ್ಷರಾದ ಶಿಳ್ಳಂಗೆರೆ ರಾಜಮ್ಮ, ಜಯಲಕ್ಷ್ಮಿ, ಲೋಕೇಶ್ವರಿ, ವೆಂಕಟಲಕ್ಷ್ಮೀ, ಲಕ್ಷ್ಮೀದೇವಿ, ಸಹ ಕಾರ್ಯದರ್ಶಿ ಗಾಂಧಿನಗರ ಮಂಜುಳ, ಮುಖಂಡರಾದ ಪುಷ್ಪ, ಮಮತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

7 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

9 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

21 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

22 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

22 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago