Categories: ಕೋಲಾರ

ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರ ಒತ್ತಾಯ

ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು,

ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ ಅಂಗನವಾಡಿ ನೌಕರರಿಗೆ ಪ್ರತಿ ತಿಂಗಳು ಗೌರವ ಧನ, ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಮುಂಬಡ್ತಿ, ವರ್ಗಾವಣೆಗಳಲ್ಲಿ ರಾಜಕೀಯ ಮಾಡದೇ ನ್ಯಾಯಯುತವಾಗಿ ಆದೇಶ ನೀಡಬೇಕು ಗ್ರಾಚೂಟಿ ಜಾರಿಯಾಗಬೇಕು. ನಿವೃತ್ತಿಯಾದವರಿಗೆ ತಕ್ಷಣ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಸುಮಾರು ವರ್ಷಗಳಿಂದ ಬಾಕಿ ಉಳಿದ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ, ಪ್ರಧಾನ ಕಾರ್ಯದರ್ಶಿ ಎನ್ ಕಲ್ಪನಾ, ಉಪಾಧ್ಯಕ್ಷರಾದ ಶಿಳ್ಳಂಗೆರೆ ರಾಜಮ್ಮ, ಜಯಲಕ್ಷ್ಮಿ, ಲೋಕೇಶ್ವರಿ, ವೆಂಕಟಲಕ್ಷ್ಮೀ, ಲಕ್ಷ್ಮೀದೇವಿ, ಸಹ ಕಾರ್ಯದರ್ಶಿ ಗಾಂಧಿನಗರ ಮಂಜುಳ, ಮುಖಂಡರಾದ ಪುಷ್ಪ, ಮಮತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago