ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು,
ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್ಪಿಜಿ ಗ್ಯಾಸ್ ಸಿಲಿಂಡರ್, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ ಅಂಗನವಾಡಿ ನೌಕರರಿಗೆ ಪ್ರತಿ ತಿಂಗಳು ಗೌರವ ಧನ, ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಮುಂಬಡ್ತಿ, ವರ್ಗಾವಣೆಗಳಲ್ಲಿ ರಾಜಕೀಯ ಮಾಡದೇ ನ್ಯಾಯಯುತವಾಗಿ ಆದೇಶ ನೀಡಬೇಕು ಗ್ರಾಚೂಟಿ ಜಾರಿಯಾಗಬೇಕು. ನಿವೃತ್ತಿಯಾದವರಿಗೆ ತಕ್ಷಣ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಸುಮಾರು ವರ್ಷಗಳಿಂದ ಬಾಕಿ ಉಳಿದ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ, ಪ್ರಧಾನ ಕಾರ್ಯದರ್ಶಿ ಎನ್ ಕಲ್ಪನಾ, ಉಪಾಧ್ಯಕ್ಷರಾದ ಶಿಳ್ಳಂಗೆರೆ ರಾಜಮ್ಮ, ಜಯಲಕ್ಷ್ಮಿ, ಲೋಕೇಶ್ವರಿ, ವೆಂಕಟಲಕ್ಷ್ಮೀ, ಲಕ್ಷ್ಮೀದೇವಿ, ಸಹ ಕಾರ್ಯದರ್ಶಿ ಗಾಂಧಿನಗರ ಮಂಜುಳ, ಮುಖಂಡರಾದ ಪುಷ್ಪ, ಮಮತಾ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…