Categories: ಕೋಲಾರ

ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರ ಒತ್ತಾಯ

ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು,

ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಬೇಕಾಗಿದೆ ಆದರೆ ಅವರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರ ಸರ್ಕಾರವು ಹಿಂದೆ ಬಿದ್ದಿದೆ ನೌಕರರ ಮತ್ತು ಸಿಬ್ಬಂದಿಯ ಯೋಗಕ್ಷೇಮಕ್ಕೆ ಅನುದಾನವನ್ನು ಕೊಡದೇ ನಿರ್ಲಕ್ಷ ವಹಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರಿಗೆ ಮೊಟ್ಟೆ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌, ಬಾಡಿಗೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡದೆ ಪ್ರತಿ ತಿಂಗಳು ಕಾರ್ಯಕರ್ತೆಯರು ಕೈಯಿಂದ ಭರಿಸುವಂತಾಗಿದೆ ಇದರಿಂದ ಸಾಕಷ್ಟು ತೊಂದರೆಯಾಗಿದೆ ರಾಜ್ಯ ಸರ್ಕಾರವು ನಿಗದಿತ ಪಿಂಚಣಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಅಂಗನವಾಡಿ ನೌಕರರಿಗೆ ಹಾಗೂ ಸಿಬ್ಬಂದಿಗೆ ಕೆಲಸಕ್ಕೆ ತಕ್ಕಂತೆ ವೇತನದ ಜೊತೆಗೆ ನಿವೃತ್ತಿ ನಂತರದ ಪಿಂಚಣಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ ಅಂಗನವಾಡಿ ನೌಕರರಿಗೆ ಪ್ರತಿ ತಿಂಗಳು ಗೌರವ ಧನ, ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಮುಂಬಡ್ತಿ, ವರ್ಗಾವಣೆಗಳಲ್ಲಿ ರಾಜಕೀಯ ಮಾಡದೇ ನ್ಯಾಯಯುತವಾಗಿ ಆದೇಶ ನೀಡಬೇಕು ಗ್ರಾಚೂಟಿ ಜಾರಿಯಾಗಬೇಕು. ನಿವೃತ್ತಿಯಾದವರಿಗೆ ತಕ್ಷಣ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಸುಮಾರು ವರ್ಷಗಳಿಂದ ಬಾಕಿ ಉಳಿದ ನಿವೃತ್ತಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ, ಪ್ರಧಾನ ಕಾರ್ಯದರ್ಶಿ ಎನ್ ಕಲ್ಪನಾ, ಉಪಾಧ್ಯಕ್ಷರಾದ ಶಿಳ್ಳಂಗೆರೆ ರಾಜಮ್ಮ, ಜಯಲಕ್ಷ್ಮಿ, ಲೋಕೇಶ್ವರಿ, ವೆಂಕಟಲಕ್ಷ್ಮೀ, ಲಕ್ಷ್ಮೀದೇವಿ, ಸಹ ಕಾರ್ಯದರ್ಶಿ ಗಾಂಧಿನಗರ ಮಂಜುಳ, ಮುಖಂಡರಾದ ಪುಷ್ಪ, ಮಮತಾ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago