ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ ವಿಹಿಂಪ ಮಧ್ಯೆ ಹೈಡ್ರಾಮ ನಡೆಯಿತು.
ಡಿಜೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಬಜರಂಗದಳ ವಿಹಿಂಪ ಕಾರ್ಯಕರ್ತರು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸಿದರು. ಕೊನೆಗೆ ಶಾಸಕ ಧೀರಜ್ ಮುನಿರಾಜು, ಹಿರಿಯ ಮುಖಂಡ ಕೆ.ಎಂ ಹನುಮಂತರಾಯಪ್ಪ ಸಮ್ಮುಖದಲ್ಲಿ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಅಮರೇಶ್ ಗೌಡ ಮತ್ತು ಬಜರಂಗದಳ ವಿಹಿಂಪ ಮುಖಂಡರಾದ ನರೇಶ್ ರೆಡ್ಡಿ, ಭಾಸ್ಕರ್, ರವಿ ಮಧ್ಯೆ ನಡೆದ ಮಾತುಕತೆಯಲ್ಲಿ ಷರತ್ತುಬದ್ಧ ಅನುಮತಿಗೆ ಆಯೋಜಕರು ಒಪ್ಪಿಗೆ ಸೂಚಿಸಿದರು.
ಡಿವೈಎಸ್ಪಿ ಪಾಂಡುರಂಗ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶಾನುಸಾರ ಶೋಭಾಯಾತ್ರೆಯನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು. ಇದಕ್ಕೆ ಸಭೆಯಲ್ಲಿದ್ದ ಆಯೋಜಕರು ಶಾಸಕ ಧೀರಜ್ ಮುನಿರಾಜು ಜೊತೆ ಸಮಾಲೋಚನೆ ನಡೆಸಿದರು. ಭಾನುವಾರವೇ ಶೋಭಾಯಾತ್ರೆ ಆಚರಿಸಲು ಸಮ್ಮತಿ ಸೂಚಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಳೆದ 14 ವರ್ಷಗಳಿಂದ ಶೋಭಾಯಾತ್ರೆ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಾರಿಯೂ ಅಹಿಕತರ ಘಟನೆಗೆ ನಾವು ಆಸ್ಪದ ನೀಡುವುದಿಲ್ಲ ಎಂದು ಭರವಸೆ ನೀಡಿದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…