ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ ವಿಹಿಂಪ ಮಧ್ಯೆ ಹೈಡ್ರಾಮ ನಡೆಯಿತು.
ಡಿಜೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಬಜರಂಗದಳ ವಿಹಿಂಪ ಕಾರ್ಯಕರ್ತರು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸಿದರು. ಕೊನೆಗೆ ಶಾಸಕ ಧೀರಜ್ ಮುನಿರಾಜು, ಹಿರಿಯ ಮುಖಂಡ ಕೆ.ಎಂ ಹನುಮಂತರಾಯಪ್ಪ ಸಮ್ಮುಖದಲ್ಲಿ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಅಮರೇಶ್ ಗೌಡ ಮತ್ತು ಬಜರಂಗದಳ ವಿಹಿಂಪ ಮುಖಂಡರಾದ ನರೇಶ್ ರೆಡ್ಡಿ, ಭಾಸ್ಕರ್, ರವಿ ಮಧ್ಯೆ ನಡೆದ ಮಾತುಕತೆಯಲ್ಲಿ ಷರತ್ತುಬದ್ಧ ಅನುಮತಿಗೆ ಆಯೋಜಕರು ಒಪ್ಪಿಗೆ ಸೂಚಿಸಿದರು.
ಡಿವೈಎಸ್ಪಿ ಪಾಂಡುರಂಗ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶಾನುಸಾರ ಶೋಭಾಯಾತ್ರೆಯನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು. ಇದಕ್ಕೆ ಸಭೆಯಲ್ಲಿದ್ದ ಆಯೋಜಕರು ಶಾಸಕ ಧೀರಜ್ ಮುನಿರಾಜು ಜೊತೆ ಸಮಾಲೋಚನೆ ನಡೆಸಿದರು. ಭಾನುವಾರವೇ ಶೋಭಾಯಾತ್ರೆ ಆಚರಿಸಲು ಸಮ್ಮತಿ ಸೂಚಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಳೆದ 14 ವರ್ಷಗಳಿಂದ ಶೋಭಾಯಾತ್ರೆ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಾರಿಯೂ ಅಹಿಕತರ ಘಟನೆಗೆ ನಾವು ಆಸ್ಪದ ನೀಡುವುದಿಲ್ಲ ಎಂದು ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…