ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ ವಿಹಿಂಪ ಮಧ್ಯೆ ಹೈಡ್ರಾಮ ನಡೆಯಿತು.
ಡಿಜೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಬಜರಂಗದಳ ವಿಹಿಂಪ ಕಾರ್ಯಕರ್ತರು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸಿದರು. ಕೊನೆಗೆ ಶಾಸಕ ಧೀರಜ್ ಮುನಿರಾಜು, ಹಿರಿಯ ಮುಖಂಡ ಕೆ.ಎಂ ಹನುಮಂತರಾಯಪ್ಪ ಸಮ್ಮುಖದಲ್ಲಿ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಅಮರೇಶ್ ಗೌಡ ಮತ್ತು ಬಜರಂಗದಳ ವಿಹಿಂಪ ಮುಖಂಡರಾದ ನರೇಶ್ ರೆಡ್ಡಿ, ಭಾಸ್ಕರ್, ರವಿ ಮಧ್ಯೆ ನಡೆದ ಮಾತುಕತೆಯಲ್ಲಿ ಷರತ್ತುಬದ್ಧ ಅನುಮತಿಗೆ ಆಯೋಜಕರು ಒಪ್ಪಿಗೆ ಸೂಚಿಸಿದರು.
ಡಿವೈಎಸ್ಪಿ ಪಾಂಡುರಂಗ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶಾನುಸಾರ ಶೋಭಾಯಾತ್ರೆಯನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು. ಇದಕ್ಕೆ ಸಭೆಯಲ್ಲಿದ್ದ ಆಯೋಜಕರು ಶಾಸಕ ಧೀರಜ್ ಮುನಿರಾಜು ಜೊತೆ ಸಮಾಲೋಚನೆ ನಡೆಸಿದರು. ಭಾನುವಾರವೇ ಶೋಭಾಯಾತ್ರೆ ಆಚರಿಸಲು ಸಮ್ಮತಿ ಸೂಚಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಳೆದ 14 ವರ್ಷಗಳಿಂದ ಶೋಭಾಯಾತ್ರೆ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಾರಿಯೂ ಅಹಿಕತರ ಘಟನೆಗೆ ನಾವು ಆಸ್ಪದ ನೀಡುವುದಿಲ್ಲ ಎಂದು ಭರವಸೆ ನೀಡಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…