ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪ್ರತಿಕ್ರಿಯಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.
ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.
ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…