ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪ್ರತಿಕ್ರಿಯಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.
ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.
ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿಳಿಸಿದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…