ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪ್ರತಿಕ್ರಿಯಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.
ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.
ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…