Categories: ರಾಜ್ಯ

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಶಾಸಕರನ್ನು ಪರಿಗಣಿಸಲಾಗುವುದು- ಸಿಎಂ ಸಿದ್ದರಾಮಯ್ಯ

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪ್ರತಿಕ್ರಿಯಿಸಿದರು.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.

ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.

ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.

ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿಳಿಸಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago