Categories: ಲೇಖನ

ನಿಜವಾದ ದೇಶ ಭಕ್ತಿ – ಧರ್ಮ ನಿಷ್ಠೆ ಎಂದರೆ ಪ್ರಿತಿಯೇ ಹೊರತು ದ್ವೇಷವಲ್ಲ…..

” ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್……

ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ…..

ನಾವು ಕೆಲವರ ನಡವಳಿಕೆಯನ್ನು ದ್ವೇಷಿಸುತ್ತೇವೆ ಹಾಗೆಯೇ ಅವರ ಪರಿವರ್ತನೆಯನ್ನು ಅಪೇಕ್ಷಿಸುತ್ತೇವೆ. ಆದರೆ ಅದು ಹೇಗೆ ಸಾಧ್ಯ ಎಂಬುದನ್ನು ಉಪೇಕ್ಷಿಸುತ್ತೇವೆ….

ಈಗ ನೇರ ವಿಷಯಕ್ಕೆ ಬರುವುದಾದರೆ, ಕೆಲವು ಸನಾತನ ಧರ್ಮದ ಪ್ರತಿಪಾದಕರು ಅಥವಾ ಅನುಯಾಯಿಗಳು ಮುಸ್ಲಿಮರನ್ನು ದ್ವೇಷಿಸುತ್ತಾರೆ ಹಾಗು ಅವರು ಬದಲಾಗಬೇಕು ಎಂದೂ ನಿರೀಕ್ಷಿಸುತ್ತಾರೆ. ಆದರೆ ಈ ಪ್ರಕ್ರಿಯೆಯಲ್ಲಿ ಅವರೆಂದೂ ಮುಸ್ಲಿಮರನ್ನು ಪ್ರೀತಿಸುವುದಿಲ್ಲ ಮತ್ತು ಸ್ವೀಕರಿಸುವುದಿಲ್ಲ. ಆಗ ಅವರಿಗೆ ಠಾಗೋರ್ ಅವರು ಹೇಳಿದಂತೆ ತಿದ್ದುವ ನೈತಿಕತೆಯೇ ಇರುವುದಿಲ್ಲ. ಇದು ಒಂದು ಉದಾಹರಣೆ ಮಾತ್ರ. ಇದೇ ರೀತಿ ಸನಾತನ ಧರ್ಮದವರಲ್ಲಿ ಬದಲಾವಣೆ ಬಯಸುವ ಮುಸ್ಲಿಮರಿಗೂ ಸಮನಾಗಿಯೇ ಅನ್ವಯಿಸುತ್ತದೆ. ಇದು ಸಾರ್ವಕಾಲಿಕ ಸತ್ಯ… ‌

ಕೆಲವೊಮ್ಮೆ ಖಾಸಗಿ ಮಾತುಕತೆಗಳಲ್ಲಿ ಕಟ್ಟಾ ಕಮ್ಯುನಿಸ್ಟ್ ವಾದಿಗಳು ‘ ಸಂಘ ಪರಿವಾರದ ಹಿಂದುತ್ವ ಪ್ರತಿಪಾದಕರು ಎಂದಿಗೂ ಬದಲಾಗುವುದಿಲ್ಲ. ಆ ಪ್ರಯತ್ನವೇ ವ್ಯರ್ಥ ‘ ಎನ್ನುತ್ತಾರೆ. ಆ ಬಗ್ಗೆ ಸಣ್ಣ ಸಹಾನುಭೂತಿಯನ್ನು ಸಹಿಸುವುದಿಲ್ಲ. ಅವರು ಕೂಡಾ ಆರೆಸ್ಸೆಸ್ ಕಾರ್ಯಕರ್ತರನ್ನು ಪ್ರೀತಿಸುವುದಿಲ್ಲ. ಅದೇರೀತಿ ಸಂಘ ಪರಿವಾರದವರು ಕಮ್ಯೂನಿಸ್ಟ್ ರನ್ನು ಅತಿಯಾಗಿ ದ್ವೇಷಿಸಿ ಅವರನ್ನು ಇವರು ಬಯಸುವ ರೀತಿಯಲ್ಲಿ ಪರಿವರ್ತಿಸುವ ನೈತಿಕತೆಯನ್ನೇ ಕಳೆದುಕೊಳ್ಳುತ್ತಾರೆ…

ಬ್ರಾಹ್ಮಣ – ದಲಿತ,
ಒಕ್ಕಲಿಗ – ಲಿಂಗಾಯತ,
ಕರಿಯ – ಬಿಳಿಯ,
ಕನ್ನಡಿಗ – ತಮಿಳ,
ಭಾರತ – ಚೀನಾ,
ಮುಸ್ಲಿಂ – ಕ್ರಿಶ್ಚಿಯನ್,
ಕಾಂಗ್ರೇಸ್ – ಬಿಜೆಪಿ,
ಬಡವ – ಶ್ರೀಮಂತ…..
ಹೀಗೆ ಎಲ್ಲಾ ‌ಸಂಘರ್ಷಗಳಲ್ಲಿ ದ್ವೇಷ ಅಸೂಯೆ, ಅನುಮಾನಗಳೇ ಮೇಲುಗೈ ಪಡೆಯುತ್ತವೆ. ಪ್ರೀತಿಗೆ ಎಲ್ಲಿಯೂ ಲವಲೇಷವೂ ಸ್ಥಾನ ಇರುವುದಿಲ್ಲ. ಇದ್ದರೂ ಅದು ಕೇವಲ ಮಾತುಗಳಿಗೆ ಮಾತ್ರ ಸೀಮಿತವಾಗುತ್ತದೆ. ಅದರ ಪರಿಣಾಮವೇ ಪರಿವರ್ತನೆ ಅತ್ಯಂತ ಕಠಿಣ ಪ್ರಕ್ರಿಯೆಯಾಗಿದೆ……

ಸಮಾಜದ ಅತ್ಯಂತ ಚಿಕ್ಕ ಘಟಕ ಕುಟುಂಬದಿಂದ ಪ್ರಾರಂಭವಾಗಿ ಅಂತರಾಷ್ಟ್ರೀಯ ಮಟ್ಟದವರೆಗೆ ಇದು‌‌ ಸಾರ್ವಕಾಲಿಕ ಸತ್ಯವೇ ಆಗಿದೆ….

ನಮ್ಮ ಮನೆಯಲ್ಲಿ ನಮ್ಮ ಮಕ್ಕಳನ್ನಾಗಲಿ, ಗಂಡ ಹೆಂಡತಿಯನ್ನಾಗಲಿ, ಅಪ್ಪಾ, ಅಮ್ಮ, ಮಕ್ಕಳಾಗಲಿ ಯಾವುದೋ ಕಾರಣಕ್ಕಾಗಿ ಬೈದರೇ ಅಥವಾ ಹೊಡೆದರೆ ಸಾಮಾನ್ಯವಾಗಿ ಮತ್ತು ಸಹಜ ಪರಿಸ್ಥಿತಿಯಲ್ಲಿ ಅವರು ಕೆಲವೇ ಕ್ಷಣಗಳಲ್ಲಿ ಅಥವಾ ಕೆಲವೇ ದಿನಗಳಲ್ಲಿ ಮತ್ತೆ ಎಲ್ಲವನ್ನೂ ಮರೆಯುತ್ತಾರೆ ಅಲ್ಲದೇ ಕೆಲವೊಮ್ಮೆ ಸಂಬಂಧ ಮತ್ತಷ್ಟು ಹೆಚ್ಚಾಗಬಹುದು. ಇದಕ್ಕೆಲ್ಲ ಮೂಲ ಕಾರಣ ನಮಗೆ ಅವರ ಬಗ್ಗೆ ಇರುವ ಪ್ರೀತಿ ಅವರಿಗೇ ಮನವರಿಕೆಯಾಗಿರುತ್ತದೆ. ಇಲ್ಲಿ ಯಾವುದೇ ಕೃತಕ ನಾಟಕಕ್ಕೆ ಅವಕಾಶ ಇರುವುದಿಲ್ಲ. ಅಷ್ಟೇ ಏಕೆ ಅನೇಕ ಸಾಕು ಪ್ರಾಣಿಗಳ ವಿಷಯದಲ್ಲಿ ಸಹ ಇದು ಎಷ್ಟೊಂದು ವಾಸ್ತವ ಅಲ್ಲವೇ. ನಾವು ಅಂದರೆ ಮನೆಯವರು ಹೊಡೆದರು ಅವು ಬಾಲ ಅಲ್ಲಾಡಿಸುತ್ತಾ ನಮ್ಮ ಬಳಿಯೇ ಬರುತ್ತವೆ. ಏಕೆಂದರೆ ನಾವು ಪ್ರೀತಿಸುವುದು ಅವಕ್ಕೆ ಗೊತ್ತಿರುತ್ತದೆ. ಇದು ಹಾಗೆಯೇ ದೇಶ ಭಾಷೆ ಮೀರಿ ವಿಸ್ತಾರವಾಗುತ್ತಾ ಹೋಗುತ್ತದೆ…..

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯ ಈ ಸಂದರ್ಭದಲ್ಲಿ ಠಾಗೋರ್ ಮಾತುಗಳು ಸಾಕಷ್ಟು ಪ್ರಾಮುಖ್ಯತೆ ಪಡೆಯುತ್ತದೆ. ಭಿನ್ನ ಅಭಿಪ್ರಾಯದ ವ್ಯಕ್ತಿಗಳನ್ನು ಪ್ರೀತಿ ಗೌರವ ಸಹನೆ ಸಭ್ಯತೆಯಿಂದ ಮಾತನಾಡಿಸಿ ಅವರ ಮನಃ ಪರಿವರ್ತನೆ ಅಥವಾ ಮನವೊಲಿಕೆಗೆ ಪ್ರಯತ್ನಿಸುವ ಬದಲು ಅವರನ್ನು ಕೆಟ್ಟ ಮಾತುಗಳಿಂದ ನಿಂದಿಸಿ ದ್ವೇಷ ಅಸೂಯೆ ಸೃಷ್ಟಿ ಮಾಡುವವರೇ ಹೆಚ್ಚಾಗಿದ್ದಾರೆ. ನಾವು ಅವರನ್ನು ಪ್ರೀತಿಸದೇ ಬದಲಾವಣೆ ಸಾಧ್ಯವಿಲ್ಲ ಎಂಬ ಪ್ರಾಥಮಿಕ ಅರಿವು ಸಹ ಅನೇಕ ಜನರಿಗೆ ಇಲ್ಲ. ಬಹುತೇಕ ಉಢಾಫೆ ಮನಸ್ಥಿತಿಯ ಜನರೇ ಹೆಚ್ಚಾಗಿದ್ದಾರೆ…….

ನಾವು ಯಾರಲ್ಲಿಯಾದರೂ ಸಾಮಾಜಿಕ ಬದಲಾವಣೆ ಬಯಸುವವರಾದರೆ, ಅತ್ಯಂತ ಜವಾಬ್ದಾರಿಯುತ ಪ್ರೀತಿ, ತಾಳ್ಮೆ, ಸಭ್ಯತೆ, ಸಹಕಾರ, ಕರುಣೆ, ಕ್ಷಮಾಗುಣ ಮುಂತಾದ ಮಾನವೀಯ ಮೌಲ್ಯಗಳನ್ನು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಂಡಿರಬೇಕು. ಕೇವಲ ಕೋಪ, ದ್ವೇಷ, ಅಸೂಯೆ, ಸಿಡುಕು ಮಾತು, ಏಕವಚನದ ಪ್ರಯೋಗಗಳಿಂದ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಬಹುದೇ ಹೊರತು ಯಾವುದೇ ಪರಿವರ್ತನೆ ಸಾಧ್ಯವಾಗುವುದಿಲ್ಲ….

ಎಡಪಂಥೀಯ ಮತ್ತು ಬಲಪಂಥೀಯ ಹಾಗೂ ಸನಾತನ ಮತ್ತು ಮುಸ್ಲಿಂ ವಿಚಾರಗಳ ಪ್ರತಿಪಾದಕರು ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ನಿಜವಾದ ದೇಶ ಭಕ್ತಿ – ಧರ್ಮ ನಿಷ್ಠೆ ಎಂದರೆ ಪ್ರಿತಿಯೇ ಹೊರತು ದ್ವೇಷವಲ್ಲ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

15 minutes ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

5 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

7 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

12 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

23 hours ago